ಅಟ್ರಾಸಿಟಿ ಕೇಸ್‌ ತನಿಖೆಗೆ ತಡೆಯಾಜ್ಞೆ ಕೋರಿ ಹೈಕೋರ್ಟ್‌ಗೆ ಉಪೇಂದ್ರ ಅರ್ಜಿ

ಬೆಂಗಳೂರು: ಎಸ್‌ಸಿ, ಎಸ್‌ಟಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ಆರೋಪದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿದೆ. ನೋಟಿಸ್ ನೀಡಿರೋ ಪೊಲೀಸರು ಉಪೇಂದ್ರ ಅವರನ್ನು ಬಂಧಿಸೋ ಸಾಧ್ಯತೆ ಇದೆ. ಪೊಲೀಸರ ಹುಡುಕಾಟದ ಮಧ್ಯೆ ನಟ ಉಪೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನ್ನ ವಿರುದ್ಧ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅಟ್ರಾಸಿಟಿ ಕೇಸ್‌ನ ತನಿಖೆಗೆ ಮಧ್ಯಂತರ ತಡೆಯಾಜ್ಞೆಗೆ ಮನವಿ ಮಾಡಲಾಗಿದೆ.

ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಉಪೇಂದ್ರ ಅವರು ಕನ್ನಡ ಗಾದೆಯನ್ನು ಬಳಸಿದ್ದಕ್ಕಾಗಿ ಅರ್ಜಿದಾರರ ವಿರುದ್ಧ ಸುಳ್ಳು ದೂರು ನೀಡಲಾಗಿದೆ. ಕ್ಷುಲ್ಲಕ ಮತ್ತು ಪ್ರಚಾರಕ್ಕಾಗಿ ದೂರನ್ನು ದಾಖಲಿಸಲಾಗಿದೆ.

ನಟ ಉಪೇಂದ್ರ ಅವರು ಸಮಾಜ/ಸಮುದಾಯದ ಎಲ್ಲಾ ವರ್ಗಗಳ ನಡುವೆ ಸೌಹಾರ್ದತೆಯನ್ನು ಕಾಪಾಡಿಕೊಂಡಿದ್ದಾರೆ. ಅಟ್ರಾಸಿಟಿ ದೂರು ದುರುದ್ದೇಶಕ ಪ್ರೇರಿತವಾಗಿದೆ. ಹೀಗಾಗಿ ತಮ್ಮ ವಿರುದ್ಧ ಎಫ್‌ಐಆರ್‌ ಹಾಗೂ ಎಸಿಪಿ ಕೊಟ್ಟ ದೂರು ರದ್ದಿಗೆ ನಟ ಉಪೇಂದ್ರ ಅವರು ಮನವಿ ಮಾಡಿದ್ದಾರೆ. ಉಪೇಂದ್ರ ಅವರ ಅರ್ಜಿಯನ್ನು ಹೈಕೋರ್ಟ್ ಇನ್ನೂ ಪುರಸ್ಕರಿಸಿಲ್ಲ. ಒಂದು ವೇಳೆ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದರೆ ಉಪೇಂದ್ರ ಅವರನ್ನು ಬಂಧಿಸೋ ಸಾಧ್ಯತೆಯಿದೆ.

 

Font Awesome Icons

Leave a Reply

Your email address will not be published. Required fields are marked *