ಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಾಣವಾಗಲಿ ಎಂದ ಸಚಿವ

ಹಾವೇರಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಅಯೋಧ್ಯೆ ರಾಮಮಂದಿರ ಬಳಿ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಾಣವಾಗಬೇಕು. ಮಹರ್ಷಿ ವಾಲ್ಮೀಕಿ ರಾಮಾಯಣ ಗ್ರಂಥ ರಚಿಸಿದ್ದಾರೆ. ಅಯೋಧ್ಯೆ ಏರ್​ಪೋರ್ಟ್​ಗೆ ಮಹರ್ಷಿ ವಾಲ್ಮೀಕಿ ಹೆಸರಿಟ್ಟಿದ್ದನ್ನು ಸ್ವಾಗತಿಸುವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖುಷಿ ತಂದಿದೆ. ಇದು ಭಾರತೀಯರ ಬಹುದಿನದ ಕನಸಾಗಿತ್ತು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಖುಷಿ ತಂದಿದೆ. ದೇಶದಲ್ಲಿ ಬಹಳಷ್ಟು ಮಂದಿರಗಳು ಇವೆ ಈಗ ರಾಮ ಮಂದಿರ ಸೇರ್ಪಡೆಯಾಗುತ್ತಿದೆ. ಇನ್ನು ಬಿಜೆಪಿ ರಾಜಕೀಯವಾಗಿ ಲಾಭ ಪಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಅವರು ರಾಜಕೀಯ ಎಲ್ಲಿ ಇಲ್ಲಾ ಹೇಳಿ? ಎಲ್ಲ ಕಡೆ ಇದೆ. ಅದು ಲಾಭ ಆಗುತ್ತೋ ನಷ್ಟವಾಗುತ್ತೋ ಚುನಾವಣೆ ನಂತರ ತಿಳಿಯುತ್ತೆ ಎಂದರು.

ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ಹಿಜಾಬ್ ವಿಚಾರವಾಗಿ ಮಾತನಾಡಿದ ಅವರು ಹಿಜಾಬ್ ವಿಚಾರದಲ್ಲಿ ಸರ್ಕಾರ ಯಾವುದೇ ಆದೇಶ ಮಾಡಿಲ್ಲ. ಮಾಡುತ್ತೆನೆ ಅಂಥಾ ಹೇಳಿದರು ಆದರೆ ಅದು ಕಾನೂನಿನಲ್ಲಿ ಇಲ್ಲ. ಹಿಜಾಬ್ ಧರಿಸುವುದು, ಬಿಡುವುದು ಅವರಿಗೆ ಬಿಟ್ಟ ವಿಷಯ. ನಡೆದುಕೊಂಡು ಬಂದಿದೆ ನಡೆದುಕೊಂಡು ಹೋಗಲಿ ಎಂದು ಜಾರಿಕೊಂಡರು.

Font Awesome Icons

Leave a Reply

Your email address will not be published. Required fields are marked *