ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಿಲ್ಲ: ಡಿಕೆಶಿ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆಗೆ ನಮ್ಮನ್ನ ಕರೆದಿಲ್ಲ, ನನ್ನನ್ನೂ ಆಹ್ವಾನಿಸಿಲ್ಲ. ಮುಖ್ಯಮಂತ್ರಿಗಳನ್ನ ಸಹ ಕರೆದಿಲ್ಲ. ನಾನು ಶಿವ ಭಕ್ತ, ಎಲ್ಲ ದೇವರುಗಳು ನನ್ನ ಹೃದಯದಲ್ಲಿದೆ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆ ಅಕ್ಕಿಯನ್ನು ಮಂತ್ರಾಕ್ಷತೆಗೆ ಬಳಸ್ತಿದ್ದಾರೆ ಎಂದು ಹೇಳಿದರು. ಇದು ಸಂತಸದ ವಿಚಾರವಾಗಿದೆ ಎಂದರು.

Font Awesome Icons

Leave a Reply

Your email address will not be published. Required fields are marked *