ಇಂದಿರಾನಗರದಲ್ಲಿರುವ ರಾಮಶ್ವರಂ ಕೆಫೆಯಲ್ಲಿ ಸ್ಫೋಟ: ಐವರು ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನ ಇಂದಿರಾನಗರದಲ್ಲಿರುವ ರಾಮಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸೋ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.

ಸ್ಫೋಟದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ರಭಸಕ್ಕೆ ರಾಮೇಶ್ವರಂ ಕೆಫೆಗೆ ಹಾನಿಯಾಗಿದೆ.

ಗ್ರಾಹಕರ ಸೋಗಿನಲ್ಲಿ ಓರ್ವ ವ್ಯಕ್ತಿ ಬಂದಿದ್ದ. ಆತನ ಬ್ಯಾಗ್​​ನಲ್ಲಿ ಸ್ಫೋಟಕ ಇತ್ತು ಎಂದು ಕೆಫೆಯ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಹೋಟೆಲ್​ಗೆ ಬಂದಿದ್ದ ಇತರೆ ಗ್ರಾಹಕರು, ಸಿಬ್ಬಂದಿ ನೀಡಿರುವ ಪ್ರಾಥಮಿಕ ಮಾಹಿತಿಯಿಂದ ಈ ರೀತಿಯ ಅನುಮಾನ ವ್ಯಕ್ತವಾಗಿದೆ. ಮತ್ತೊಂದು ಕಡೆ ಕೆಫೆಯ ಸಿಲಿಂಡರ್​ ಸ್ಫೋಟ ಸಂಭವಿಸಿದೆ ಅಂತಲೂ ಹೇಳಲಾಗುತ್ತಿದೆ.

ಹೆಚ್ಎಎಲ್ ಠಾಣಾ ವ್ಯಾಪ್ತಿಯಲ್ಲಿ ಸ್ಫೋಟ ಸಂಭವಿಸಿದೆ.  .

Font Awesome Icons

Leave a Reply

Your email address will not be published. Required fields are marked *