ಎಲ್ಲರನ್ನು ಆಹ್ವಾನಿಸಿದ ವಿಜಯ ರಾಘವೇಂದ್ರ ಕುಟುಂಬ

ಬೆಂಗಳೂರು: ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ಆಗಸ್ಟ್​ 6ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಇದೀಗ ಸ್ಪಂದನಾ ಉತ್ತರ ಕ್ರಿಯೆಗೆ ಕುಟುಂಬ ಸಿದ್ಧತೆ ಮಾಡುಕೊಳ್ಳುತ್ತಿದ್ದಾರೆ. ಜೊತೆಗೆ ಅಭಿಮಾನಿಗಳಿಗೆ ಭಾಗವಹಿಸುವಂತೆ ವಿಜಯ ಕುಟುಂಬ ಆಹ್ವಾನ ನೀಡಿದ್ದಾರೆ.

‘ಆತ್ಮೀಯರೇ ನಮ್ಮ ಮನೆಯ ಮಗಳು ಸ್ಪಂದನಾ ವಿಜಯ ರಾಘವೇಂದ್ರ ಅವರು ಆಗಸ್ಟ್ 6ರಂದು ನಮ್ಮನ್ನಗಲಿರಿವುದು ನಿಮಗೆಲ್ಲರಿಗೂ ತಿಳಿದ ವಿಷಯ. ಉತ್ತರ ಕ್ರಿಯೆ ಆಗಸ್ಟ್ 16ರ ಬುಧವಾರದಂದು ಮಲ್ಲೇಶ್ವರ ಸ್ವಗೃಹದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಶಾಂತಿ ಹೋಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಯಿಂದ ಕೋದಂಡರಾಮಪುರದ ಯಂಗ್‌ಸ್ಟರ್ಸ್ ಕಬಡ್ಡಿ ಆಟದ ಮೈದಾನದಲ್ಲಿ (ಬಿಬಿಎಂಪಿ ಮೈದಾನ) ಭೋಜನವನ್ನು ಹಮ್ಮಿಕೊಂಡಿದ್ದೇನೆ.

ಆದ್ದರಿಂದ ತಾವುಗಳು ಭಾಗವಹಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರಬೇಕಾಗಿ ವಿನಂತಿಸಿಕೊಳ್ಳುತ್ತೇವೆ ಎಂದು ಬಿ.ಕೆ ಶಿವರಾಂ ಮತ್ತು ಎಸ್.ಎ ಚಿನ್ನೆಗೌಡರು ಮತ್ತು ಕುಟುಂಬಸ್ಥರು ಸರ್ವರಿಗೂ ಆಹ್ವಾನ ನೀಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *