ಕಪಿಲ ನದಿಯ ಸುಳಿಗೆ ಸಿಲುಕಿ ಮೂವರು ಅಯ್ಯಪ್ಪ ಮಾಲಧಾರಿಗಳು ಸಾವು

ನಂಜನಗೂಡು: ನಂಜನಗೂಡು ಪಟ್ಟಣದ ಕಪಿಲ ನದಿಯ ಹೆಜ್ಜಿಗೆ ಸೇತುವೆ ಬಳಿ ಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದ ಐವರ ಪೈಕಿ ಮೂವರು ನೀರು ಪಾಲಾಗಿ ಇನ್ನುಳಿದ ಇಬ್ಬರು ಬದುಕುಳಿದಿರುವ ಘಟನೆ ನಡೆದಿದೆ.

ತುಮಕೂರು ಮೂಲದ ಗವಿ ರಂಗ (19)  ರಾಕೇಶ್ (19) ಹಾಗೂ ಅಪ್ಪು (16) ಅಯ್ಯಪ್ಪ ಮಾಲಧಾರಿಗಳು ಕಪಿಲಾ ನದಿಯಲ್ಲಿ ಜೀವ ಕಳೆದುಕೊಂಡಿದ್ದಾರೆ.

ಅಯ್ಯಪ್ಪನ ದರ್ಶನ ಮುಗಿಸಿಕೊಂಡು ತಡರಾತ್ರಿ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರನ ದರ್ಶನ ಮಾಡುವ ಸಲುವಾಗಿ ಆಗಮಿಸಿದ ಅಯ್ಯಪ್ಪ ಭಕ್ತರು ಸ್ನಾನಕ್ಕೆಂದು ಕಪಿಲಾ ನದಿಯ ಹೆಜ್ಜಿಗೆ ಸೇತುವೆಯ ಬಳಿ 5 ಜನ ಮಾಲಧಾರಿಗಳು ನೀರಿಗಿಳಿದು ಸುಳಿಗೆ ಸಿಲುಕಿದ ಪರಿಣಾಮ ಮೂವರು ಮೇಲೆಳಲಾಗದೆ ಮೃತಪಟ್ಟರೆ ಇಬ್ಬರು ಮಾಲಧಾರಿಗಳು ಜೀವ ರಕ್ಷಿಸಿಕೊಂಡಿದ್ದಾರೆ.

ನಂಜನಗೂಡು ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಮೃತಪಟ್ಟ ಇಬ್ಬರು ಮಾಲಧಾರಿಯ ಶವವನ್ನು ಹೊರ ತೆಗೆಯಲಾಗಿದೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *