ಕಾಲುವೆಗೆ ತಳ್ಳಿ ಯವಕನ್ನೇ ಕೊಲೆ ಮಾಡಿದ ಸ್ನೇಹಿತರು

ಹರಿಯಾಣ: ಸೋನೆಪತ್‌ನಲ್ಲಿ ಓರ್ವ ಯುವಕನನ್ನು ಸ್ನೇಹಿತರೇ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಯುವಕ ದೆಹಲಿಯ ಖ್ಯಾತ ಎಸಿಪಿ ಪುತ್ರ ಎಂದು ತಿಳಿದುಬಂದಿದೆ.

ಕೊಲೆಯಾದ ಯುವಕ ಲಕ್ಷ್ಯ ಚೌಹಾಣ್ (24) ನನ್ನು, ಸ್ನೇಹಿತರು ಮದುವೆಗೆಂದು ಕೆರದುಕೊಂಡು ಹೋಗಿ ಈ ಕೃತ್ಯವೆಸಗಿದ್ದಾರೆ. ದೆಹಲಿಯ ಸಹಾಯಕ ಪೊಲೀಸ್ ಆಯುಕ್ತ ಯಶ್‌ಪಾಲ್ ಸಿಂಗ್ ಅವರ ಪುತ್ರನಾದ ಚೌಹಾಣ್ ತೀಸ್ ಹಜಾರಿ ನ್ಯಾಯಾಲಯದ ವಕೀಲರಾಗಿದ್ದರು. ಲಕ್ಷ್ಯ ಸ್ನೇಹಿತರಾದ, ವಿಕಾಸ್ ಭಾರದ್ವಾಜ್ ಮತ್ತು ಸಹಚರ ಅಭಿಷೇಕ್ ಕಾಲುವೆಗೆ ತಳ್ಳಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಕೊಲೆ ನಡೆಯಲು, ಮೃತ ಯುವಕ ಸಾಲ ಹಿಂದಿರುಗಿಸುವಂತೆ ಕೇಳಿದ್ದೆ ಕಾರಣ ಎಂದು ತಿಳಿದುಬಂದಿದೆ. ಸೋಮವಾರದಂದು ಲಕ್ಷ್ಯ ಅವರು ತಮ್ಮ ಸ್ನೇಹಿತರೊಂದಿಗೆ ಸೋನೆಪತ್‌ನಲ್ಲಿ ಮದುವೆಗೆಂದು ಅವರ ಸ್ನೇಹಿತರ ಜೊತೆ ಹೋಗಿದ್ದರು. ಆದರೆ ಅವರು ಮನೆಗೆ ಬಾರದ ಕಾರಣ ತಂದೆ ಯಶ್‌ಪಾಲ್ ಸಿಂಗ್ ಅವರು ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ನಂತರ ಪೊಲೀಸರು ದೂರು ದಾಖಲಿಸಿಕೊಂಡು ಶೋಧ ಕಾರ್ಯ ನಡೆಸಿದಾಗ ಚೌಹನ್ ಅವರ ಸ್ನೇಹಿತರೇ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಅಭೀಷೆಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪರಾರಿಯಾಗಿರುವ ಭಾರದ್ವಾಜ್‌ಗಾಗಿ ಪೊಲೀಸರು ಹುಟುಕಾಟ ನಡೆಸಲಾಗುತ್ತಿದೆ.

Font Awesome Icons

Leave a Reply

Your email address will not be published. Required fields are marked *