ಕೆಟ್ಟು ನಿಂತ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಬೈಕ್ ಡಿಕ್ಕಿ: ಶಿಕ್ಷಕ ಸಾವು

ಔರಾದ್: ರಸ್ತೆಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಹಿಂದಿನಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯ ವನಮಾರಪಳ್ಳಿ ಗ್ರಾಮದ ಬಳಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಔರಾದ್ ತಾಲೂಕಿನ ವನಮಾರಪಳ್ಳಿ ಗ್ರಾಮದ ಬಾಬುರಾವ್ ಶಂಕರ ವಾಘಮಾರೆ(42) ಎಂಬುವರು ಮೃತಪಟ್ಟಿದ್ದಾರೆ.

ಔರಾದ್‌ನಿಂದ ಮಹಾರಾಷ್ಟ್ರದ ಕಡೆಗೆ ಸಾಗುತ್ತಿದ್ದ ಟ್ರ್ಯಾಕ್ಟರ್ ಕೆಟ್ಟು ಹೋದ ಪರಿಣಾಮ ಟ್ರೈಲರ್‌‌ ಒಂದನ್ನೇ ರಸ್ತೆ ಮೇಲೆ ನಿಲ್ಲಿಸಿದ್ದರು. ಔರಾದ್‌ನಿಂದ ಊರಿಗೆ ಹೋಗುತ್ತಿದ್ದಾಗ ಕೆಟ್ಟು ನಿಂತಿದ್ದ ಟ್ರೈಲರ್‌ಗೆ ಢಿಕ್ಕಿ ಹೊಡೆದಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಬೀದರ್‌ ಬ್ರಿಮ್ಸ್‌ಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಔರಾದ್ ಪೊಲೀಸ್‌ ಠಾಣೆ ಪೊಲೀಸರು‌ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *