ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುಸಿದುಬಿದ್ದ ಮಾಜಿ ಡಿಸಿಎಂ

ಹೈದರಾಬಾದ್:‌ ಹೈದರಾಬಾದ್​ನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ಮಹಮೂದ್ ಅಲಿ ಕುಸಿದುಬಿದ್ದಿರುವ ಘಟನೆ ನಡೆದಿದೆ. ದೇಶಾದ್ಯಂತ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಭಾರತ ಇಂದು ತನ್ನ 75ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ.

ಇದೇ ವೇಳೆ ತೆಲಂಗಾಣದ ಮಾಜಿ ಉಪ ಮುಖ್ಯಮಂತ್ರಿ ಮಹಮೂದ್ ಅಲಿ ಅವರ ಆರೋಗ್ಯ ಹದಗೆಟ್ಟಿತ್ತು. ತೆಲಂಗಾಣ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ವೇಳೆ ಅಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿದ್ದರು. ನೀರು ಕೊಡಿ ಎಂದು ಜನರು ಕೈಮುಗಿದುಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಸಲಾಗಿದೆ.

 

Font Awesome Icons

Leave a Reply

Your email address will not be published. Required fields are marked *