ಚಿಕ್ಕಮಗಳೂರಿನಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ : ನಾಲ್ವರು ಅರೆಸ್ಟ್

ಚಿಕ್ಕಮಗಳೂರು: ನಗರದಲ್ಲಿ ದಲಿತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶಿವರಾಮ್, ರಾಜಪ್ಪ, ಶಂಕರ್, ತಮ್ಮಯ್ಯ ಎಂದು ಗುರುತಿಸಲಾಗಿದೆ.

ಜ.1 ರಂದು ಜಿಲ್ಲೆಯ ತರೀಕೆರೆ ತಾ| ಗೇರಮರಡಿ ಗ್ರಾಮದ ಗೊಲ್ಲರ ಬೀದಿಗೆ ದಲಿತ ಯುವಕ ಮಾರುತಿ ಎಂಬುವವರು ಜೆಸಿಬಿ ಜೊತೆ ಕೆಲಸಕ್ಕೆ ಬಂದಿದ್ದರು.ಮಾರುತಿ ದಲಿತ ಯುವಕ ಎಂದು ಗೊತ್ತಾಗುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿ 20 ಸಾವಿರ ವಸೂಲಿ ಮಾಡಿದ್ದರು.

ನಂತರ ಮಾರುತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಘಟನೆ ಸಂಬಂಧ ಜನವರಿ 2 ರಂದು ತರೀಕೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಸದ್ಯ ನಾಲ್ವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡ 11ಜನರ ಬಂಧನಕ್ಕೆ ಡಿವೈಎಸ್ಪಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *