ಚಿತ್ರ ಪ್ರಚಾರಕ್ಕೆ ಬಂದಿದ್ದ ತಮಿಳು ನಟ ಸಿದ್ಧಾರ್ಥ್‌ಗೆ ಕರವೇ ಮುತ್ತಿಗೆ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ನಟ ಸಿದ್ಧಾರ್ಥ್‌ ಅವರು ತಮ್ಮ ತಮಿಳು ಚಿತ್ರ “ಚಿತ್ರ ಪ್ರಚಾರಕ್ಕಾಗಿ ಸುದ್ದಿಗೋಷ್ಠಿ ನಡೆಸುತ್ತಿದ್ದ ಹೋಟೆಲ್‌ ಗೆ ನುಗ್ಗಿ ಸುದ್ದಿಗೋಷ್ಠಿ ನಿಲ್ಲುಸುವಂತೆ ಒತ್ತಾಯಿಸಿದ ಘಟನೆ ನಡೆದಿದೆ.

ಬೆಂಗಳೂರಿನ ಮಲ್ಲೇಶ್ವರಂನ ಹೋಟೆಲ್‌ನಲ್ಲಿ ಸಿದ್ಧಾರ್ಥ್ ತಮ್ಮ ಚಿತ್ರದ ಬಗ್ಗೆ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಸುದ್ದಿಗೋಷ್ಠಿ ನಡುವೆ ಸಭಾಂಗಣಕ್ಕೆ ಪ್ರವೇಶಿಸಿದ ಕಾರ್ಯಕರ್ತರು, ರಾಜ್ಯದಲ್ಲಿ ಕಾವೇರಿ ಬಿಕ್ಕಟ್ಟು ತಾರಕಕ್ಕೇರಿದೆ. ಈ ವೇಳೆ ಬೆಂಗಳೂರಿನಲ್ಲಿ ತಮಿಳು ಚಿತ್ರದ ಪ್ರಚಾರ ಕಾರ್ಯಕ್ರಮ ನಡೆಸುವುದಕ್ಕೆ ನಮ್ಮ ಆಕ್ಷೇಪವಿದೆ ಎಂದರು.

ಈ ವೇಳೆ ಸುದ್ದಿಗೋಷ್ಠಿ ಪೂರ್ಣಗೊಳಿಸುತ್ತೇನೆ ಎಂದು ಸಿದ್ಧಾರ್ಥ್ ಕೇಳಿಕೊಂಡರು. ಆದರೆ ಕರವೇ ಕಾರ್ಯಕರ್ತರು ಸುದ್ದಿಗೋಷ್ಠಿ ಪೂರ್ಣಗೊಳಿಸಲು ಅವಕಾಶ ನೀಡಲಿಲ್ಲ. ಅಲ್ಲದೆ ತಮಿಳು ಚಲನಚಿತ್ರ ಪ್ರಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು.

Font Awesome Icons

Leave a Reply

Your email address will not be published. Required fields are marked *