ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಮುಂಬೈ ಇಂಡಿಯನ್ಸ್ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

17ನೇ ಆವೃತ್ತಿಯ ಐಪಿಎಲ್​ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದೆ.

ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಸರಣಿಯಲ್ಲಿ ಮೊದಲ ಹಾಗೂ ಕೊನೆಯ ಬಾರಿ ಮುಖಾಮುಖಿಯಾಗಲಿವೆ. ಏಕೆಂದರೆ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿವಿಧ ಗುಂಪುಗಳಲ್ಲಿದ್ದು, ಈ ಸೀಸನ್​ನಲ್ಲಿ ಉಭಯ ತಂಡಗಳಿಗೆ ಒಂದು ಪಂದ್ಯವನ್ನು ಮಾತ್ರ ಮೀಸಲಿಡಲಾಗಿದೆ.

ಸತತ ಸೋಲುಗಳಿಂದ ಕಂಗೆಟ್ಟಿರುವ ಉಭಯ ತಂಡಗಳಿಗೂ ಗೆಲುವು ಬಹಳ ಮುಖ್ಯ. ಎರಡೂ ತಂಡಗಳ ಪ್ಲೇಆಫ್‌ ಹಾದಿ ಮತ್ತಷ್ಟು ಕಠಿಣಗೊಳ್ಳಲಿದೆ. ಇನ್ನು ಈ ಪಂದ್ಯದ ಟಾಸ್ ಮುಗಿದಿದ್ದು, ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರಿನಲ್ಲಿ  ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ರೀಸ್ ಟೋಪ್ಲಿ, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಆಡುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ ನಲ್ಲಿ  ರೋಹಿತ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಮೊಹಮ್ಮದ್ ನಬಿ, ಶ್ರೇಯಸ್ ಗೋಪಾಲ್, ಜಸ್ಪ್ರೀತ್ ಬುಮ್ರಾ, ಜೆರಾಲ್ಡ್ ಕೋಟ್ಜಿ, ಆಕಾಶ್ ಮಧ್ವಾಲ್ ಆಡುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *