ಡಿಸಿಸಿ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳಿಂದ ಮಹತ್ವದ ದಾಖಲೆಗಳ ಪರಿಶೀಲನೆ

ಬೀದರ್: ಬಿಜಾಪುರ ಹಾಗೂ ಕಲ್ಬುರ್ಗಿ ಮತ್ತು ರಾಯಚೂರು ಐಟಿ ಅಧಿಕಾರಿಗಳು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇಂದು 11 ಗಂಟೆ ಸುಮಾರಿಗೆ ಐಟಿ ಅಧಿಕಾರಿಗಳ ತಂಡ ಬ್ಯಾಂಕ್ ಪ್ರವೇಶ ಮಾಡಿದ್ದಾರೆ. ಪೊಲೀಸರ ತಂಡದೊಂದಿಗೆ ಬ್ಯಾಂಕ್ ಗೆ ಆಗಮಿಸಿದ ಐಟಿ ಅಧಿಕಾರಿಗಳ ತಂಡ, ಬ್ಯಾಂಕ್ ಜಿ.ಎಮ್ ಸೇರಿದಂತೆ ಎಲ್ಲಾ ಸಿಬ್ಬಂದಿಯ ಮೊಬೈಲ್ ಬಂದ್ ಮಾಡಿಸಿ ತನಿಖೆ ಕೈಗೊಂಡಿದ್ದಾರೆ.

ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಹೋದರ ಅಮರ ಖಂಡ್ರೆ ಅಧ್ಯಕ್ಷಯಲ್ಲಿ ನಡೆಯುತ್ತಿರುವ ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್. ಇನ್ನು ಈ ಬಾರಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ ಖಂಡ್ರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಈ ದಾಳಿ ಭಾರಿ ಮಹತ್ವ ಪಡೆದುಕೊಂಡಿದೆ.

ಸುಮಾರು 15 ರಿಂದ 20 ಜನ ಐಟಿ ಅಧಿಕಾರಿಗಳ ತಂಡದಿಂದ ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Font Awesome Icons

Leave a Reply

Your email address will not be published. Required fields are marked *