ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್‌: ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಗೆ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪುದುಚೇರಿಯಲ್ಲಿ ಎನ್​ಆರ್​ ಕಾಂಗ್ರೆಸ್​-ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಕೆಲವು ದಿನಗಳ ಹಿಂದೆ ತಮಿಳ್​ ಸಾಯಿ ಸೌಂದರರಾಜನ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕತ್ವದಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು ಎಂದು ವರದಿಯಾಗಿದೆ. ಅವರು ದೆಹಲಿಯಲ್ಲಿ ರಾಜೀನಾಮೆ ಸಲ್ಲಿಸಿದರು ಮತ್ತು ಸೋಮವಾರ ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರವನ್ನು ಕಳುಹಿಸಿದರು. ಲೋಕಸಭೆ ಚುನಾವಣೆಗೆ ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೌಂದರರಾಜನ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Font Awesome Icons

Leave a Reply

Your email address will not be published. Required fields are marked *