ನಟ ಯಶ್​ ಬೆಂಗಾವಲು ವಾಹನ ಬೈಕ್‌ ಗೆ ಡಿಕ್ಕಿ; ಯುವಕ ಮೃತ್ಯು

Photo Credit :
News Kannada

ಗದಗ: ನಟ ಯಶ್ ರ್ತ್‌ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಮೂವರು ಅಭಿಮಾನಿಗಳು ವಿದ್ಯುತ್‌ ಪ್ರವಹಿಸಿ ಸಾವನ್ನಪ್ಪಿದ್ದರು. ಮೃತರ ಕುಟುಂಬವನ್ನು ಭೇಟಿ ಮಾಡಿ ನಂತರ ಗಂಭೀರವಾಗಿ ಗಾಯಗೊಂಡ ಮೂವರು ಅಭಿಮಾನಿಗಳನ್ನು  ಆಸ್ಪತ್ರೆಗೆ ಹೋಗಿ ಭೇಟಿ ನೀಡಿದ್ದಾರೆ.

ಈ ವೇಳೆ ಯಶ್ ವಾಪಸ್‌ ತೆರಳುತ್ತಿದ್ದಾಗ ಯಶ್​ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಜ.9) ಬೆಳಗ್ಗೆ ನಿಖಿಲ್ ಸಾವನ್ನಪ್ಪಿದ್ದಾರೆ.  ಮೃತಪಟ್ಟ ನಿಖಿಲ್​​​ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ನಟ ಯಶ್ ಅವರನ್ನು ನೋಡಬೇಕು ಎಂದು ಹಿಂಬಾಲಿಸುತ್ತಿದ್ದ ನಿಖಿಲ್ ಸ್ಕೂಟಿ ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ಡಿಕ್ಕಿ ಆಗಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಿಖಿಲ್​ನನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಸಾವನ್ನಪ್ಪಿದ್ದಾರೆ.

ಹನಿ ಹನಿ ಕೂಡಿ ಹಳ್ಳ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

This site is protected by reCAPTCHA and the Google
Privacy Policy and
Terms of Service apply.

44

News Kannada

The most exciting, trusted and preferred news websites of Karnataka and Kannadigas around the world.

Read More Articles

Font Awesome Icons

Leave a Reply

Your email address will not be published. Required fields are marked *