ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆಯಾಗಿದ ಘಟನೆ ನಗರದ ಜೈಲ್ ರಸ್ತೆಯಲ್ಲಿ ನಡೆದಿದೆ. ಈ ಹಿಂದೆ ಮನೆಯಲ್ಲಿ ನಿವೃತ್ತ ಇಂಜಿನಿಯರ್ ಸೇರಿದಂತೆ ಐವರು ವಾಸವಿದ್ದರು. ನಿವತ್ತ ಇಂಜಿನಿಯರ್ ದೊಡ್ಡ ಸಿದ್ದವ್ವನ ಹಳ್ಳಿ ಮೂಲದವರೆನ್ನಲಾಗಿದೆ.

ನಿವೃತ್ತ ಲೋಕೋಪಯೋಗಿ ಇಲಾಖೆ ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರರಾದ ಕೃಷ್ಣರೆಡ್ಡಿ, ನರೇಂದ್ರ ರೆಡ್ಡಿ, ಮಗಳು ತ್ರಿವೇಣಿ ಇದ್ದರು. ಈ ಸಂಬಂಧ ಸಂಬಂಧಿಕ ಪವನ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.

ಜಗನ್ನಾಥ ರೆಡ್ಡಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಯಾರೊಂದಿಗೂ ಸಂಪರ್ಕವಿರಲಿಲ್ಲ ಎನ್ನಲಾಗಿದೆ. ಗುರುವಾರ ರಾತ್ರಿ ಪರಿಶೀಲಿಸಿದ್ದ ಪೊಲೀಸರು ಮೂರು ಅಸ್ಥಿಪಂಜರ ದೊರೆತಿವೆ ಎಂದು ತಿಳಿಸಿದ್ದರು. ಆದರೆ ಬೆಳಗ್ಗೆ ಐದು ಅಸ್ತಿ ಪಂಜರ ಪತ್ತೆಯಾಗಿದೆ.

 

Font Awesome Icons

Leave a Reply

Your email address will not be published. Required fields are marked *