ಪೊಲೀಸರ ರಾಜ್ಯ ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ : ಬಿ.ವೈ.ವಿಜಯೇಂದ್ರ

ಬೆಂಗಳೂರು: ಕರಸೇವಕರರನ್ನು 48 ಗಂಟೆಗೆ ಒಳಗೆ   ಬಿಡುಗಡೆಗೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ  ಗಡುವು ನೀಡಿದ್ದಾರೆ.

ರಾಮ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ  ಇಂದು ನಡೆದ ಬಿಜೆಪಿ  ಬೃಹತ್ ಪ್ರತಿಭಟನಾ ಸಭೆಯಲ್ಲಿ  ಮಾತನಾಡಿದರು ಅವರು ಶ್ರೀನಗರದ ಲಾಲ್‍ಚೌಕದಲ್ಲಿ ಕಾರ್ಯಕರ್ತರು ಮುರಳಿ ಮನೋಹರ್ ಜೋಷಿಯವರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇವೆ. ಪೊಲೀಸರ ರಾಜ್ಯ ಸರ್ಕಾರದ ಗೊಡ್ಡು  ಬೆದರಿಕೆಗೆ ಹೆದರುವುದಿಲ್ಲ.

ಶ್ರೀಕಾಂತ್ ಪೂಜಾರಿಯವರ ಬಿಡುಗಡೆ ಮಾಡದಿದ್ದರೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ  ಮುತ್ತಿಗೆ ಹಾಕುತ್ತೇವೆ  ಇಂದು ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ ಎಂದು ತಿಳಿಸಿದರು. ಅವಶ್ಯಕತೆ ಬಂದರೆ ರಸ್ತೆಗಿಳಿದು ಹೋರಾಟ ಮಾಡುತ್ತೇವೆ ಎಂದು  ಎಚ್ಚರಿಕೆಯನ್ನು ನೀಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *