ಹಾಸನ, ಏಪ್ರಿಲ್ 4,2024 (www.justkannada.in): ಬಿಜೆಪಿ- ಜೆಡಿಎಸ್ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ. ಮೈತ್ರಿ ಶಾಶ್ವತವಾದದ್ದು. ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ನುಡಿದರು.
ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಬಿವೈ ವಿಜಯೇಂದ್ರ, ಹೆಚ್.ಡಿ.ರೇವಣ್ಣ, ಡಿ.ವಿ.ಸದಾನಂದ ಗೌಡ ಉಪಸ್ಥಿತರಿದ್ದರು.
ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ, ಬಿವೈ ವಿಜಯೇಂದ್ರ, ಪ್ರಧಾನಿ ಮೋದಿ ಅವರಿಗಾಗಿ ಹೆಚ್ ಡಿ ದೇವೇಗೌಡರು ಮೈತ್ರಿ ಮಾಡಿಕೊಂಡಿದ್ದಾರೆ. ದೇವೇಗೌಡರು ಖುದ್ದು ಮೋದಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ರೈತ, ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ದೇಶದಿಂದ ಕಿತ್ತೊಗೆಯಬೇಕು. ಆ ನಿಟ್ಟಿನಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ನಮ್ಮೆಲ್ಲರ ಹಿರಿಯರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಆಶೀರ್ವಾದ ಮಾಡಿರಲಿಲ್ಲ. ಈ ಚುನಾವಣೆಯಲ್ಲಿ ದೇವೇಗೌಡರ ಆಶೀರ್ವಾದ ನಮ್ಮ ಮೇಲಿದೆ ಎಂದು ವಿಜಯೇಂದ್ರ ಹೇಳಿದರು.
ಹಾಸನ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಗೆಲ್ಲಿಸಲು ನಾವು ಕೆಲಸ ಮಾಡಬೇಕು ಎಂದು ಬಿವೈ ವಿಜಯೇಂದ್ರ ಕರೆ ನೀಡಿದರು.
Key words: BJP, JDS, alliance, BY Vijayendra
The post ಬಿಜೆಪಿ-ಜೆಡಿಎಸ್ ಮೈತ್ರಿ ಶಾಶ್ವತ- ಬಿ.ವೈ ವಿಜಯೇಂದ್ರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.