ಮಗು ಮಲಗುವಾಗ ಅಳುತ್ತೆ ಎಂದು ಗೋಡೆಗೆ ಎಸದ ತಂದೆ: ಸಾವು ಬದುಕಿನ ನಡುವೆ ಮಗುವಿನ ಹೋರಾಟ

ಧಾರವಾಡ:  ಮಗು ಮಲಗುವಾಗ ಅಳುತ್ತೆ ಎಂಬ ಕಾರಣಕ್ಕೆ ತಂದೆಯೊಬ್ಬ ಗೋಡೆಗೆ ಎಸೆದು ಬೀಸಾಕಿದ ಘಟನೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಈ ಅಮಾನವೀಯ ನಡೆದಿದೆ.

ಶಂಬುಲಿಂಗಯ್ಯ ಶಾಪುರಮಠ ಎಂಬಾತ  ಮಗುವನ್ನು ಎಸೆದ ಪಾಪಿ ತಂದೆ.

ಕಳೆದ ರಾತ್ರಿ ಒಂದು ವರ್ಷದ ಹೆಣ್ಣು ಮಗು ಅಳುತ್ತಿತ್ತು. ಅಳುವ ಮಗುವಿಗೆ ಸಮಾಧಾನ ಪಡಿಸುವ ಬದಲಿಗೆ ಮಗುವಿನ ಕಾಲು ಹಿಡಿದು ಗೋಡೆಗೆ ಎಸೆದಿದ್ದಾನೆ.

ಗೋಡೆಗೆ ರಭಸವಾಗಿ ಎಸೆದ ಪರಿಣಾಮ ಮಗುವಿನ ತಲೆಗೆ ಬಲವಾದ ಪೆಟ್ಟಾಗಿದೆ. ಕೂಡಲೇ ಮಗುವಿನ ತಾಯಿ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗು ಸಾವು ಬದುಕಿನ ನಡುವೆ ಹೋರಾಡ ಮಾಡುತ್ತಿದೆ.

ಸದ್ಯ ಕುಟುಂಬಸ್ಥರಿಂದ ಗರಗ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪಾಪಿ ತಂದೆ ಶಂಬುಲಿಂಗಯ್ಯನನ್ನು ಬಂಧಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *