ಬೆಂಗಳೂರು: ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಜೈಲು ಸೇರಿದ್ದ ವರ್ತೂರು ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಎರಡನೇ ವಾರದಲ್ಲಿ ಸ್ಪರ್ಧಿಸುತ್ತಿದ್ದ ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದರು.
ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ವರ್ತೂರು ಸಂತೋಷ್ ಅವರಿಗೆ ಎರಡನೇ ಚಾನ್ಸ್ ಸಿಕ್ಕಿದೆ. ಈಗ ಅವರು ಮತ್ತೆ ದೊಡ್ಮನೆ ಒಳಗೆ ಪ್ರವೇಶ ಪಡೆದಿದ್ದಾರೆ. ವರ್ತೂರು ಸಂತೋಷ್ ಅವರು ಹೊರ ಜಗತ್ತಿನ ಸಂಪರ್ಕಕ್ಕೆ ಬಂದು ಮತ್ತೆ ಬಿಗ್ ಬಾಸ್ ಮನೆಗೆ ಕಾಲಿಟ್ಟಿರುವುದರಿಂದ ಅವರ ಆಟದ ವೈಖರಿ ಬದಲಾಗಲಿದೆ.
ವೀಕ್ಷಕರ ಒಲವು ಯಾವ ಕಡೆ ಇದೆ ಎಂಬುದು ಅವರಿಗೆ ಈಗಾಗಲೇ ಅರ್ಥ ಆಗಿರುತ್ತದೆ. ಅದಕ್ಕೆ ತಕ್ಕಂತೆಯೇ ಅವರು ಆಟ ಮುಂದುವರಿಸುತ್ತಾರೆ.