ಮನೆ ಮನೆಗೆ ತೆರಳಿ ಅಯೋಧ್ಯೆಯ ಮಂತ್ರಾಕ್ಷತೆ ವಿತರಿಸಿದ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ತಾಲೂಕಿನ ಮುಗುಳುವಳ್ಳಿ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಪವಿತ್ರ ಮಂತ್ರಾಕ್ಷತೆಯನ್ನ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹಂಚಿದ್ದಾರೆ.

ಶನಿವಾರ (ಜ. 6) ರಂದು ವಿವಿಧ ಕಾರ್ಯಕ್ರಮಗಳಿಗಾಗಿ ತಾಲೂಕಿಗೆ ಆಗಮಿಸಿದ್ದ ವೇಳೆ ಮಂತ್ರಾಕ್ಷತೆಯನ್ನ ವಿತರಿಸಿದ್ದಾರೆ. ಇದಕ್ಕೂ ಮುನ್ನ ಮುಗುಳುವಳ್ಳಿ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಕರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ ದೇವಸ್ಥಾನದಲ್ಲಿ ಅಯೋಧ್ಯೆಯಿಂದ ಬಂದ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಪವಿತ್ರ ಮಂತ್ರಾಕ್ಷತೆ ಹಾಗೂ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿದರು.

ಮಂತ್ರಾಕ್ಷತೆ ನೀಡಿದ ಶೋಭಾ ಕರಂದ್ಲಾಜೆ, ಇದೇ 22ಕ್ಕೆ ರಾಮಮಂದಿರ ಉದ್ಘಾಟನೆ ಇದೆ. ನಿಮ್ಮ ಗ್ರಾಮದ ಈಶ್ವರ ದೇವಾಲಯದಲ್ಲಿ ಪೂಜೆ ಇರಲಿದೆ. ರಾಮಮಂದಿರ ಉದ್ಘಾಟನೆಯ ನೇರಪ್ರಸಾರದ ಕಾರ್ಯಕ್ರಮ ವೀಕ್ಷಣೆಗೆ ಅಲ್ಲೇ ಟಿವಿ ಕೂಡ ಇರುತ್ತೆ. ಸಂಜೆ ನಿಮ್ಮ ಮನೆ ಮುಂದೆ ಐದು ದೀಪ ಹಚ್ಚಿ ಎಂದು ಮನವಿ ಮಾಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *