ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇವೆ. ಆದರೆ ರಾಮಮಂದಿರ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ನಾವು ರಾಮಭಕ್ತರು ಎಂದು ಕಾಂಗ್ರೆಸ್ ಹೇಳಲು ಆರಂಭಿಸಿದೆ.
ನಾವು ಕೂಡ ರಾಮಭಕ್ತರೇ ರಾಮಮಂದಿರಕ್ಕೆ ನಮ್ಮದೂ ಕೊಡುಗೆ ಇದೆ. ರಾಮಮಂದಿರ ಬಾಗಿಲು ತೆಗೆಸಿದ್ದೇ ನಾವು. ಪೂಜೆ ಮಾಡಲು ಅವಕಾಶ ಕೊಟ್ಟಿದ್ದೆ ನಾವು ಎಂದು ಕಾಂಗ್ರೆಸ್ ಹೇಳಿದೆ.
ಮಹಾತ್ಮ ಗಾಂಧೀಜಿಗಿಂತ ದೊಡ್ಡ ರಾಮಭಕ್ತ ಇದ್ದಾರಾ? ಜನವರಿ 22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ಕಾಂಗ್ರೆಸ್. ಈ ಸಂಬಂಧ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್ ಹಾಕಿ ರಾಮ ಮಂದಿರಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯ ಪಟ್ಟಿಯನ್ನು ನೀಡಿದೆ.
🔹ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ.
🔹ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು.
🔹ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ.…
— Karnataka Congress (@INCKarnataka) January 8, 2024