ಮಹಾತ್ಮ ಗಾಂಧೀಜಿಗಿಂತ ದೊಡ್ಡ ರಾಮಭಕ್ತ ಇದ್ದಾರಾ? : ಕಾಂಗ್ರೆಸ್

ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇವೆ. ಆದರೆ ರಾಮಮಂದಿರ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿಚಾರದಲ್ಲಿ  ರಾಜಕೀಯ ನಡೆಯುತ್ತಿದೆ. ನಾವು ರಾಮಭಕ್ತರು  ಎಂದು  ಕಾಂಗ್ರೆಸ್  ಹೇಳಲು ಆರಂಭಿಸಿದೆ.

ನಾವು ಕೂಡ ರಾಮಭಕ್ತರೇ ರಾಮಮಂದಿರಕ್ಕೆ ನಮ್ಮದೂ ಕೊಡುಗೆ ಇದೆ. ರಾಮಮಂದಿರ ಬಾಗಿಲು ತೆಗೆಸಿದ್ದೇ ನಾವು. ಪೂಜೆ ಮಾಡಲು ಅವಕಾಶ ಕೊಟ್ಟಿದ್ದೆ ನಾವು ಎಂದು ಕಾಂಗ್ರೆಸ್ ಹೇಳಿದೆ.

ಮಹಾತ್ಮ ಗಾಂಧೀಜಿಗಿಂತ ದೊಡ್ಡ ರಾಮಭಕ್ತ ಇದ್ದಾರಾ? ಜನವರಿ 22 ರಂದು ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಅದೇಶಿಸಿರುವುದು ಕಾಂಗ್ರೆಸ್. ‌ ಈ ಸಂಬಂಧ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್‌ ಹಾಕಿ ರಾಮ ಮಂದಿರಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯ ಪಟ್ಟಿಯನ್ನು ನೀಡಿದೆ.

Font Awesome Icons

Leave a Reply

Your email address will not be published. Required fields are marked *