ಮಿಸಸ್ ಕರ್ನಾಟಕ ಕಿರೀಟವನ್ನ ಮುಡುಗೇರಿಸಿಕೊಂಡ ಕವಿತಾ ವೀರೇಂದ್ರ

ಬೆಂಗಳೂರು: ರಿಷಿ ಸ್ಪೀಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕರ್ನಾಟಕದ ಅತಿದೊಡ್ಡ ಬ್ಯೂಟಿ ಪೇಜೆಂಟ್ ರಿಷಿಸ್ ಮಿಸಸ್ ಕರ್ನಾಟಕ ಕಿರೀಟವನ್ನು ಕವಿತಾ ವೀರೇಂದ್ರ ತಮ್ಮದಾಗಿಸಿಕೊಂಡಿದ್ದಾರೆ.

 

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಖ್ಯಾತ ಬಾಲಿವುಡ್ ನಟಿ ಮಧುಬಾಲ ವಿಶೇಷ ಅತಿಥಿಯಾಗಿ ಆಗಮಿಸಿ ರೂಪದರ್ಶಿಗಳಿಗೆ ಪ್ರೋತ್ಸಾಹ ಕೊಟ್ಟರು

ಈ ವೇಳೆ ಮಾತನಾಡಿದ ಮಧುಬಾಲ, ಈ ಕಾರ್ಯಕ್ರಮದಲ್ಲಿ ಭಾಗವಾಗಿರುವುದು ಖುಷಿ ಕೊಟ್ಟಿದೆ. ಇಂದು ಮಹಿಳೆಯರು ರಾಜಕೀಯ, ಸಾಹಿತ್ಯ, ಶಿಕ್ಷಣ ಮತ್ತು ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಿ ತೋರಿಸಿದ್ದಾರೆ. ತಾಯಿಯಾಗಿ ಮಕ್ಕಳ ಲಾಲನೆ, ಪಾಲನೆ ಜೊತೆಯಲ್ಲಿ ತನ್ನ ಸೌಂದರ್ಯ ಮತ್ತು ಆರೋಗ್ಯದ ಮೇಲೆ ಗಮನಹರಿಸಬೇಕಿದೆ ಎಂದರು.

ಇನ್ನು ಕವಿತಾ ವೀರೇಂದ್ರ ವಿನ್ನರ್ ಆಗಿ ಹೊರಹೊಮ್ಮಿದ್ರೆ, ಪ್ರಿಯಾಂಕ ರಿಯಾ ಫಸ್ಟ್ ವಿನ್ನರ್ ಆಗಿ ಹಾಗೂ ಶಹಿಸ್ತಾ ನಾಜ್ ಸೆಕೆಂಡ್ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರು.

Font Awesome Icons

Leave a Reply

Your email address will not be published. Required fields are marked *