ಮಂಡ್ಯ: ಮೈಶುಗರ್ ಮಾಜಿ ಅಧ್ಯಕ್ಷ ನಾಗರಾಜಪ್ಪ ಅವರ ವಿರುದ್ಧ ನೂರಾರು ಕೋಟಿ ಭ್ರಷ್ಟಾಚಾರ ಆರೋಪ ಸಾಬೀತಾಗಿದೆ. ಹೀಗಾಗಿ ರಾಜ್ಯ ಸರ್ಕಾರ ನಷ್ಟದ ಹಣ ವಸೂಲಿ ಮಾಡಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ಧಾರಿಸಿದೆ.
2008ರಲ್ಲಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವರ ಕಾಲದಲ್ಲಿ ನಾಗರಾಜಪ್ಪ ಮೈಶುಗರ್ ಕಾರ್ಖಾನೆ ಅಧ್ಯಕ್ಷರಾಗಿದ್ದರು. ನಾಗರಾಜಪ್ಪ ಯಡಿಯೂರಪ್ಪ ಅವರ ಪರಮಾಪ್ತರಾಗಿದ್ದಾರೆ. ನಾಗರಾಜಪ್ಪ ಅವರು ಹೊಸ ಮಿಲ್ ಖರೀದಿ, ಡಿಸ್ಟಿಲರಿ ಮಾರಾಟ-ಸೋರಿಕೆ, ಮೈ ರಮ್, ಮೈ ವಿಸ್ಕಿ, ಸಕ್ಕರೆ ಮಾರಾಟದಲ್ಲಿ ಅಕ್ರಮ ಎಸಗಿದ್ದಾರೆ
ಎಂದು ತಿಳಿದಿದೆ.
ನಾಗರಾಜಪ್ಪ ಮೈಶುಗರ್ ಅಧ್ಯಕ್ಷರಾಗಿದ್ದ ಕಾರ್ಖಾನೆಗೆ 121 ಕೋಟಿ ರೂ. ನಷ್ಟವಾಗಿತ್ತು ಎಂಬ ಆರೋಪ ಇತ್ತು.
ಈ ಪ್ರಕರಣಕ್ಕೆ ಸಂಬಂಧಿಸದಂತೆ ಸದಾನಂದಗೌಡ ನೇತೃತ್ವದ ಸರ್ಕಾರ ಲೋಕಾಯುಕ್ತ ತನಿಖೆಗೆ ವಹಿಸಿತ್ತು. ಲೋಕಾಯುಕ್ತ ತನಿಖೆ ವೇಳೆ ಅಕ್ರಮ, ಭ್ರಷ್ಟಾಚಾರ ಆರೋಪ ಸಾಬೀತಾಯಿತು. ನಾಗರಾಜಪ್ಪರಿಂದ ನಷ್ಟದ ಹಣ ವಸೂಲಿ ಮಾಡಿ, ಸಿವಿಲ್ ಪ್ರಕರಣ ದಾಖಲಿಸಲು ಲೋಕಾಯುಕ್ತ ಆದೇಶಿಸಿತ್ತು.
ಲೋಕಾಯುಕ್ತ ನ್ಯಾಯಾಧೀಶರ ಆದೇಶ ಪಾಲಿಸಲು ಈ ಹಿಂದಿನ ಸರ್ಕಾರ ಹಿಂದೇಟು ಹಾಕಿದ್ದವು, ಆದರೆ ಹಾಲಿ ಸರ್ಕಾರ ಪ್ರಕರಣ ದಾಖಲಿಸಲು ಮುಂದಾಗಿದೆ.