ಮೈಸೂರು ಒಡೆಯರಿಗೆ ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ಅಧಿಕೃತ ಆಹ್ವಾನ

ಮೈಸೂರು: ಅಯೋಧ್ಯೆಯಲ್ಲಿ ರಾಮಮಂದಿರ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೂ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜನವರಿ 21 ರಂದು ಅಯೋಧ್ಯಗೆ ತೆರಳುತ್ತಿದ್ದಾರೆ.

ಈ ಕುರಿತು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ರಾಮಲಲ್ಲಾ ಪ್ರಾಣ ಪ್ರತಿಷ್ಠದಲ್ಲಿ ಭಾಗಿಯಾಗುತ್ತಿರುವುದು ನನ್ನ ಸೌಭಾಗ್ಯ. 500 ವರ್ಷಗಳ ನಂತರ ರಾಮಮಂದಿರ ನಿರ್ಮಾಣವಾಗಿದೆ. ಇದು ತುಂಬಾ ಖುಷಿಯ ವಿಚಾರ. ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್‌ ಅವರು ನಮ್ಮ ಮೈಸೂರಿನವರು. ಅವರಿಗೆ ಅಭಿನಂದನೆ ತಿಳಿಸುವೆ ಎಂದು ಹೇಳಿದರು.

ಅಯೋಧ್ಯೆ ಈ ಹಿಂದೆಯೂ ಪವಿತ್ರ ಧಾರ್ಮಿಕ ಕ್ಷೇತ್ರವಾಗಿತ್ತು. ಈಗಲೂ ಅದು ಅದೇ ರೀತಿ ಮುಂದುವರಿಯಲಿದೆ. ಇದು ಎಲ್ಲರಿಗೂ ಹೆಮ್ಮೆಯ ವಿಚಾರ ಎಂದರು.

Font Awesome Icons

Leave a Reply

Your email address will not be published. Required fields are marked *