ಯತ್ನಾಳ್ ಒಡೆತನದ ಶುಗರ್ ಫ್ಯಾಕ್ಟರಿ ಬಂದ್​​ಗೆ ಆದೇಶ‌

ಕಲಬುರಗಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಶುಗರ್ ಫ್ಯಾಕ್ಟರಿ ಬಂದ್​​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ನೀಡಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಸಿದ್ದಶ್ರೀ ಸಕ್ಕರೆ ಕಾರ್ಖಾನೆ ಬಂದ್​ಗೆ ಸೂಚಿಸಿಸಲಾಗಿದೆ.

ಸಿದ್ದಶ್ರೀ ಸಕ್ಕರೆ ಕಾರ್ಖಾನೆ ವಿರುದ್ಧ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬಿಡಲಾಗುತ್ತಿತ್ತು ಎನ್ನೋ ಆರೋಪ ಕೇಳಿ ಬಂದಿದೆ. ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನೆಲೆ ಫ್ಯಾಕ್ಟರಿ ಬಂದ್​ಗೆ ಆದೇಶ ನೀಡಲಾಗಿದೆ.

ಇದರ ಜೊತೆಯಲ್ಲಿ ಫ್ಯಾಕ್ಟರಿಗೆ ನೀಡರೋ ವಿದ್ಯುತ್ ನೀರಿನ ಸಂರ್ಪಕ ಕಡಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ.

Font Awesome Icons

Leave a Reply

Your email address will not be published. Required fields are marked *