ರಾಜ್ಯತ್ವ ಹಾಗೂ ರಕ್ಷಣೆಗಾಗಿ ಲಡಾಖ್‌ನಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಜನ

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ರಾಜ್ಯತ್ವ ಮತ್ತು ಸಂವಿಧಾನದ ಆರನೇ ಪರಿಚ್ಛೇದದಡಿಯಲ್ಲಿ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಮೈಕೊರೆಯುವ ಚಳಿಯ ನಡುವೆಯೂ ಸಾವಿರಾರು ಜನರು ಬೀದಿಗಿಳಿದು  ಪ್ರತಿಭಟನೆ ನಡೆಸಿದ್ದಾರೆ.
Photo Credit :
News Kannada

ಡಾಖ್‌: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ರಾಜ್ಯತ್ವ ಮತ್ತು ಸಂವಿಧಾನದ ಆರನೇ ಪರಿಚ್ಛೇದದಡಿಯಲ್ಲಿ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಮೈಕೊರೆಯುವ ಚಳಿಯ ನಡುವೆಯೂ ಸಾವಿರಾರು ಜನರು ಬೀದಿಗಿಳಿದು  ಪ್ರತಿಭಟನೆ ನಡೆಸಿದ್ದಾರೆ.

ಲೇಹ್ ಅಪೆಕ್ಸ್ ಬಾಡಿ  ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್  ಜಂಟಿಯಾಗಿ ಪ್ರತಿಭಟನೆಗೆ ಕರೆ ನೀಡಿತ್ತು. ಲಡಾಖ್‌ಗೆ ರಾಜ್ಯ ಸ್ಥಾನಮಾನ, ಸಂವಿಧಾನದ ಆರನೇ ಪರಿಚ್ಛೇದದಡಿಯಲ್ಲಿ ಸಾಂವಿಧಾನಿಕ ರಕ್ಷಣೆ, ಯುವಕರಿಗೆ ಉದ್ಯೋಗಗಳಲ್ಲಿ ಮೀಸಲಾತಿ ಮತ್ತು ಲೇಹ್-ಕಾರ್ಗಿಲ್‌ಗೆ ಪ್ರತ್ಯೇಕ ಸಂಸದೀಯ ಕ್ಷೇತ್ರಗಳನ್ನು ರಚಿಸಬೇಕು ಎಂದು ಘೋಷಣೆಗಳನ್ನು ಕೂಗಿ ರ್‍ಯಾಲಿ ನಡೆಸಿದ್ದಾರೆ.

ಸಾವಿರಾರು ಜನರು ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗುವ ವಿಡಿಯೊ ವೈರಲ್‌ ಆಗುತ್ತಿದೆ. ಲಡಾಖ್‌ ಜನರ ಬೇಡಿಕೆ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವಾಲಯವು ಫೆಬ್ರುವರಿ 19 ರಂದು ನವದೆಹಲಿಯಲ್ಲಿ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರ ಅಧ್ಯಕ್ಷತೆಯಲ್ಲಿ ಲಡಾಖ್ ಉನ್ನತ ಅಧಿಕಾರ ಸಮಿತಿಯ ಸಭೆ ಕರೆದಿದೆ.

ಹನಿ ಹನಿ ಕೂಡಿ ಹಳ್ಳ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

This site is protected by reCAPTCHA and the Google
Privacy Policy and
Terms of Service apply.

44

News Kannada

The most exciting, trusted and preferred news websites of Karnataka and Kannadigas around the world.

Read More Articles

Font Awesome Icons

Leave a Reply

Your email address will not be published. Required fields are marked *