ರಾಮಮಂದಿರ ಉದ್ಘಾಟನೆ ವಿಚಾರಕ್ಕೆ ಆಕ್ರೋಶ ಹೊರ ಹಾಕಿದ ಎನ್​ಸಿಪಿ ಪವಾರ್

ಮುಂಬೈ: ಜನವರಿ 22 ರಂದು ನಡೆಯಲಿರುವ ಭವ್ಯ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ  ಮುಖ್ಯಸ್ಥ ಶರದ್ ಪವಾರ್​ಗೆ ಅಹ್ವಾನ ಪತ್ರ ನೀಡಿಲ್ಲ. ಇದರಿಂದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಪವಾರ್​, ರಾಮ ಮಂದಿರ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ NCP ಮುಖ್ಯಸ್ಥ ಶರದ್ ಪವಾರ್ ಅವರು, ‘ರಾಮ ಮಂದಿರ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಿಲ್ಲ. ​ರಾಮ ಮಂದಿರದ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಆಡಳಿತ ಪಕ್ಷಕ್ಕೆ ಜನ ಬೆಂಬಲವಿಲ್ಲ. ಆ ಕಾರಣಕ್ಕಾಗಿ ರಾಮನ ಹೆಸರಿಟ್ಟು ಮುಂದಿನ ಚುನಾವಣೆ ನಡೆಸಲು ತಂತ್ರ ರೂಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇನ್ನು ಇಲ್ಲಿವರೆಗೆ ಪ್ರಧಾನಿ ಮೋದಿ ಸೇರಿ ಒಟ್ಟು 6,000ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಆದರೆ ಇದರಲ್ಲಿ ಪವಾರ್ ಅವರನ್ನು ಆಹ್ವಾನಿಸಿಲ್ಲ ಎಂದು ತಿಳಿದು ಬಂದಿದೆ. ​

Font Awesome Icons

Leave a Reply

Your email address will not be published. Required fields are marked *