ರಾಮ ಮಂದಿರ ಉದ್ಘಾಟನೆ: ಎಸ್​ಡಿಪಿಐ ವಿರೋಧ

ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಈ ರಾಮಮಂದಿರ  ನಿರ್ಮಾಣ ಮಾಡಿರುವುದಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವಿರೋಧ ವ್ಯಕ್ತಪಡಿಸಿದೆ.

‘ರಾಮಮಂದಿರವನ್ನು ಬಾಬ್ರಿ ಮಸೀದಿಯ ಜಾಗದಲ್ಲಿ ನಿರ್ಮಿಸಲಾಗಿದೆ. ನಾವು ಯಾರ ವಿರುದ್ಧವೂ ಇಲ್ಲ. ನಾವು ನ್ಯಾಯ ಕೇಳುತ್ತಿದ್ದೇವೆ ಅಷ್ಟೇ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಮಾಡಲಾಗಿದೆ.

ಇನ್ನು ಕೆಲವು ಎಸ್​ಡಿಪಿಐ ಮುಖಂಡರು ತಮ್ಮ ಈ ಸಾಲುಗಳನ್ನು ವಾಟ್ಸಪ್​​ ಸ್ಟೇಟಸ್​ ಇಟ್ಟಿದ್ದಾರೆ.

ರಾಮಮಂದಿರ ಉದ್ಘಾಟನೆ, ಆ ದಿನ ನೆತ್ತರು ಹರಿಯುವುದು ಗ್ಯಾರಂಟಿ  ‘ಆ ದಿನ (ಜನವರಿ22 ರಂದು) ನೆತ್ತರು ಹರಿಯುವುದು ಗ್ಯಾರಂಟಿ. ರಾಮಮಂದಿರ ಉರುಳಿಸಿ ಅದೇ ಜಾಗದಲ್ಲಿ ಮಸೀದಿ ನಿರ್ಮಾಣ ಆಗುತ್ತೆ’ ಎಂದು ನೆಲಮಂಗಲದಲ್ಲಿ ಅನ್ಯಕೋಮಿನ ವ್ಯಕ್ತಿಯಿಂದ ವಿವಾದಾತ್ಮಕ ಹೇಳಿಕೆ ನೀಡಲಾಗಿದೆ.

ಬೂದಿಹಾಳ್ ಗ್ರಾಮದಲ್ಲಿರುವ ಅಕ್ಕಪಕ್ಕದ ಅಂಗಡಿಯವರು ಗಲಾಟೆ ಮಾಡಿಕೊಂಡಿದ್ದಾರೆ. ಧರ್ಮೇಂದರ ಪಾಂಡೆ ಹಾಗೂ ಹುಸೇನ್ ನಡುವೆ ಮಾತುಕತೆ ಆರೋಪ ಮಾಡಲಾಗಿದ್ದು, ಪ್ರಕರಣ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ NCR ದಾಖಲು ಮಾಡಲಾಗಿದೆ.

Font Awesome Icons

Leave a Reply

Your email address will not be published. Required fields are marked *