ರಾಮ ಮಂದಿರ ಉದ್ಘಾಟನೆ: ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್‍ಗೆ ಆಹ್ವಾನ

ಚೆನ್ನೈ:  ಅಯೋಧ್ಯೆಯಲ್ಲಿ ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲು ಭಾರತ ತಂಡದ ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್‍ ಅವರಿಗೆ ಆಹ್ವಾನ ನೀಡಲಾಗಿದೆ.

ಚೆನ್ನೈನಲ್ಲಿರುವ ಅಶ್ವಿನ್ ಅವರ ನಿವಾಸದಲ್ಲಿ ತಮಿಳುನಾಡಿನ ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ.ಎಸ್.ಜಿ.ಸೂರ್ಯ ಮತ್ತು ಉಪಾಧ್ಯಕ್ಷ ವೆಂಕಟರಾಮನ್ ಸಿ ಅವರು  ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಆಹ್ವಾನ ನೀಡಿದರು.

ಇದಕ್ಕೂ ಮುನ್ನ ಆರ್ ಎಸ್‍ಎಸ್ ಸಹ-ಪ್ರಾಂತೀಯ ಕಾರ್ಯದರ್ಶಿ ಧನಂಜಯ್ ಸಿಂಗ್ ಮತ್ತು ಜಾಖರ್ಂಡ್ ರಾಜ್ಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕರ್ಮವೀರ್ ಸಿಂಗ್ ಎಂಎಸ್ ಧೋನಿ ಅವರನ್ನುಆಹ್ವಾನಿಸಿದ್ದಾರೆ

ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರಿಗೆ ಮುಂಬೈ ನಿವಾಸದಲ್ಲಿ, ವಿಶಾಖಪಟ್ಟಣದಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೋಡಿಯನ್ನು ಆಹ್ವಾನಿಸಲಾಗಿತ್ತು.

Font Awesome Icons

Leave a Reply

Your email address will not be published. Required fields are marked *