ಲಂಚ ಸ್ವೀಕಾರ: ಆಹಾರ ವಿಭಾಗದ ನಿರೀಕ್ಷಕ ಮತ್ತು ಸಿಬ್ಬಂದಿ ಇಬ್ಬರು ಬಂಧನ

ಬಾಗಲಕೋಟೆ: 60 ಸಾವಿರ ಲಂಚ ಸ್ವೀಕರಿಸುವಾಗ ಆಹಾರ ಇಲಾಖೆ ನಿರೀಕ್ಷಕ ಮತ್ತು ಸಿಬ್ಬಂದಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಬಾಗಲಕೋಟೆ ತಹಶೀಲ್ದಾರ್ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತರು ಆಹಾರ ವಿಭಾಗದ ನಿರೀಕ್ಷಕ ಈರಯ್ಯ ಕೋಟಿ, ಸಿಬ್ಬಂದಿ ಮಲ್ಲಿಕಾರ್ಜುನ ಹಾವರಗಿ ಅವರನ್ನು ಹಿಡಿದಿದ್ದಾರೆ. ಅಮಾನತುಗೊಂಡ ಪಡಿತರ ಅಂಗಡಿ ಪರವಾನಗಿ ಮುಂದುವರಿಕೆಗೆ ಲಂಚ ಪಡೆಯುವ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುರೇಂದ್ರ ಗಡಗಡೆ ಎಂಬುವರು ಲೋಕಾಯುಕ್ತರಿಗೆ ನೀಡಿದ ದೂರಿನ ಅನ್ವಯ ಡಿವೈಎಸ್ಪಿ ಪುಷ್ಪಲತಾ ಎನ್. ನೇತೃತ್ವದಲ್ಲಿ ಈ ದಾಳಿ ನಡೆದಿದೆ.

Font Awesome Icons

Leave a Reply

Your email address will not be published. Required fields are marked *