ಲವ್ ಫೇಲ್ಯೂರ್: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ

ಶಿವಮೊಗ್ಗ: ಪ್ರೀತಿಸುತ್ತಿದ್ದ ಯುವಕ ಕೈ ಕೊಟ್ಟು ಮೋಸ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಬಿಳುಕೊಪ್ಪದ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅಧೀಕ್ಷಾ (20) ಮೃತ ದುರ್ದೈವಿ.

ಅಧೀಕ್ಷಾ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಧೀಕ್ಷಾ ಪ್ರೀತಿಸುತ್ತಿದ್ದ ಯುವಕ ಮೋಸ ಮಾಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮರಣೋತ್ತರ ಪರೀಕ್ಷೆಗಾಗಿ ತೀರ್ಥಹಳ್ಳಿ ಪಟ್ಟಣದ ಜಯಚಾಮರಾಜೇಂದ್ರ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ಧಾರೆ.

Font Awesome Icons

Leave a Reply

Your email address will not be published. Required fields are marked *