ಶಬರಿಮಲೆ ಅಯ್ಯಪ್ಪ ಭಕ್ತರಿದ್ದ ಕಾರು ಅಪಘಾತ – ಓರ್ವ ಮೃತ್ಯು, ಮೂವರು ಗಂಭೀರ

ಮಡಿಕೇರಿ: ಶಬರಿಮಲೆ ಅಯ್ಯಪ್ಪ ಭಕ್ತರಿದ್ದ ಕಾರು ಅಪಘಾತವಾಗಿ ಓರ್ವ ಮೃತಪಟ್ಟಿದ್ದು ಮೂವರು ಗಂಭೀರ ಗಾಯಗೊಂಡ ಘಟನೆ ಅಂಗಮಾಲಿ ಪೆರುಂಬುರ್ ಬಳಿ ನಡೆದಿದೆ.

ಶಬರಿಮಲೆಯಿಂದ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರದ ಹಾರಂಗಿ ದೊಡ್ಡತ್ತೂರು ನಿವಾಸಿ ಚಂದ್ರ ಮೃತಪಟ್ಟವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳನ್ನು ಕುಶಾಲನಗರದ ಲಿಂಗಂ, ಹರೀಶ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದೆ..

Font Awesome Icons

Leave a Reply

Your email address will not be published. Required fields are marked *