ಶ್ರಮಜೀವಿ ರೈಲು ಸ್ಫೋಟ ಪ್ರಕರಣ : ಇಬ್ಬರಿಗೆ ಗಲ್ಲು ಶಿಕ್ಷೆ ಪ್ರಕಟ

ಜೌನ್‌ಪುರ: 2005ರ ಶ್ರಮಜೀವಿ ಎಕ್ಸ್‌ಪ್ರೆಸ್‌ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಇಂದು (ಬುಧವಾರ) ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ(ಐ) ರಾಜೇಶ್‌ ರೈ ಅವರು ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಜುಲೈ 28, 2005 ರಂದು ಉತ್ತರ ಪ್ರದೇಶದ ಜೌನ್‌ಪುರ ರೈಲು ನಿಲ್ದಾಣದ ಬಳಿ ಶ್ರಮಜೀವಿ ಎಕ್ಸ್‌ಪ್ರೆಸ್‌ ಕೋಚ್‌ನಲ್ಲಿ ಸ್ಫೋಟ ಸಂಭವಿಸಿ 14 ಜನರು ಮೃತಪಟ್ಟಿದ್ದರು ಮತ್ತು 61 ಜನ ಗಾಯಗೊಂಡಿದ್ದರು.

ಸ್ಫೋಟ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ(ಐ) ರಾಜೇಶ್‌ ರೈ ಅವರು, ಕಳೆದ ಡಿ.22 ರಂದು ಹರ್ಕತ್-ಉಲ್-ಜಿಹಾದ್-ಅಲ್-ಇಸ್ಲಾಮಿಯ ಸಂಘಟನೆಯ ಇಬ್ಬರು ಕಾರ್ಯಕರ್ತರಾದ ಹಿಲಾಲುದ್ದೀನ್ ಮತ್ತು ನಫಿಕುಲ್ ಬಿಸ್ವಾಸ್ ತಪ್ಪಿತಸ್ಥರೆಂದು ತೀರ್ಪು ನೀಡಿದ್ದು, ಇಂದು ಆದರೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದಾರೆ.

ಬಾಂಗ್ಲಾದೇಶ ನಿವಾಸಿ ಹಿಲಾಲುದ್ದೀನ್ ವಿರುದ್ಧ ರೈಲಿನಲ್ಲಿ ಬಾಂಬ್ ಇಟ್ಟ ಆರೋಪ ಹೊರಿಸಿದ್ದರೆ, ಪಶ್ಚಿಮ ಬಂಗಾಳದ ನಿವಾಸಿ ನಫಿಕುಲ್ ಬಿಸ್ವಾಸ್ ವಿರುದ್ಧ ಸಹಾಯ ಮಾಡಿದ ಆರೋಪವಿದೆ. .

ಶ್ರಮಜೀವಿ ರೈಲು ಸ್ಫೋಟ ಪ್ರಕರಣದಲ್ಲಿ ಇತರ ಇಬ್ಬರು ಅಪರಾಧಿಗಳಿಗೆ 2016ರಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು.

 

Font Awesome Icons

Leave a Reply

Your email address will not be published. Required fields are marked *