ಸಂಸತ್ತು ಉದ್ದೇಶಿಸಿ ರಾಷ್ಟ್ರಪತಿ ಅವರ ಮಾತಿನ ಹೈಲೆಟ್ಸ್‌ ಇಲ್ಲಿದೆ. . .

ನವದೆಹಲಿ: ಇಂದಿನಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ನಾಳೆ ಮಧ್ಯಂತರ ಬಜೆಟ್‌ ಅನ್ನು ಮಂಡನೆಯಾಗಲಿದೆ. ಈ ನಡುವೆ ಸಂಸತ್ತು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತನಾಡಿದ್ದಾರೆ. ಹಾಗಾದ್ರೇ ಅವರ ಮಾತಿನ ಹೈಲೆಟ್ಸ್ ಏನು ಎನ್ನುವುದನ್ನು ನೋಡುವುದಾದರೆ. . .

ಕಳೆದ ವರ್ಷ ಭಾರತಕ್ಕೆ ಸಾಧನೆಗಳಿಂದ ತುಂಬಿತ್ತು. ಅನೇಕ ಯಶಸ್ಸುಗಳು ಇದ್ದವು – ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಯಿತು. ಈ ಹಿಂದೆ ಐದು ದುರ್ಬಲ ಆರ್ಥಿಕತೆಗಳ ಸಾಲಿಗೆ ಸೇರಿದ್ದ ಭಾರತ ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದರು. ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತ ಆಯೋಜಿಸಿದ್ದ ಯಶಸ್ವಿ ಜಿ 20 ಶೃಂಗಸಭೆ ವಿಶ್ವದಲ್ಲಿ ಭಾರತದ ಪಾತ್ರವನ್ನು ಬಲಪಡಿಸಿತು. ಏಷ್ಯನ್ ಗೇಮ್ಸ್ ನಲ್ಲಿ ಭಾರತ 100ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದೆ. ಭಾರತವು ಅಟಲ್ ಸುರಂಗವನ್ನು ಸಹ ಪಡೆದುಕೊಂಡಿದೆ ಎಂದಿದ್ದಾರೆ.

ಜೊತೆಗೆ ಶತಮಾನಗಳಿಂದಲೂ ರಾಮಮಂದಿರದ ಆಶಯವಿದ್ದು, ಅದು ಈ ವರ್ಷ ಈಡೇರಿದೆ ಎಂದರು. ಗುಲಾಮಗಿರಿಯ ಯುಗದಲ್ಲಿ ಮಾಡಿದ ಕಾನೂನುಗಳು ಈಗ ಇತಿಹಾಸದ ಭಾಗವಾಗಿದೆ. ತ್ರಿವಳಿ ತಲಾಖ್ ಎಂಬ ಅನಿಷ್ಟ ಪದ್ಧತಿಯನ್ನು ಕೊನೆಗೊಳಿಸಲು ಸರ್ಕಾರ ಕಟ್ಟುನಿಟ್ಟಾದ ಕಾನೂನು ನಿಬಂಧನೆಗಳನ್ನು ಮಾಡಿದೆ ಎಂದು ಅವರು ಹೇಳಿದರು. ‘ಮೇಕ್ ಇನ್ ಇಂಡಿಯಾ’ ಮತ್ತು ‘ಆತ್ಮನಿರ್ಭರ ಭಾರತ್’ ನಮ್ಮ ಶಕ್ತಿಗಳಾಗಿವೆ . ರಕ್ಷಣಾ ಉತ್ಪಾದನೆಯು 1 ಲಕ್ಷ ಕೋಟಿ ರೂ.ಗಳ ಗಡಿ ದಾಟಿದೆ ಎಂದು ರಾಷ್ಟ್ರಪತಿಗಳು ಶ್ಲಾಘಿಸಿದರು. ಇಂದು ನಾವು ನೋಡುತ್ತಿರುವ ಸಾಧನೆಗಳು ಕಳೆದ 10 ವರ್ಷಗಳ ವಿಸ್ತರಣೆಯಾಗಿದೆ. ನಾವು ಬಾಲ್ಯದಿಂದಲೂ ‘ಗರೀಬಿ ಹಟಾವೋ’ ಘೋಷಣೆಯನ್ನು ಕೇಳಿದ್ದೇವೆ. ಇಂದು, ನಮ್ಮ ಜೀವನದಲ್ಲಿ ಮೊದಲ ಬಾರಿಗೆ, ಬಡತನವನ್ನು ದೊಡ್ಡ ಪ್ರಮಾಣದಲ್ಲಿ ನಿವಾರಿಸುವುದನ್ನು ನಾವು ನೋಡುತ್ತೇವೆ.

ವ್ಯಾಪಾರ ಮಾಡುವ ಸುಲಭತೆಯೂ ಸುಧಾರಿಸಿದೆ. ದೇಶದಲ್ಲಿ ವ್ಯಾಪಾರಕ್ಕೆ ಉತ್ತಮ ವಾತಾವರಣವಿದೆ. ಡಿಜಿಟಲ್ ಇಂಡಿಯಾ ವ್ಯವಹಾರವನ್ನು ಸುಲಭಗೊಳಿಸಿದೆ. ಡಿಜಿಟಲ್ ಇಂಡಿಯಾ ದೇಶದ ಪ್ರಮುಖ ಸಾಧನೆಯಾಗಿದೆ. ಇಂದು ಜಗತ್ತಿನ ಇತರೆ ರಾಷ್ಟ್ರಗಳೂ ಯುಪಿಎ ಮೂಲಕ ವಹಿವಾಟು ಸೌಲಭ್ಯ ಒದಗಿಸುತ್ತಿವೆ. ಖಾಸಗಿ ವಲಯದ ಸಾಮರ್ಥ್ಯದ ಮೇಲೆ ಸರ್ಕಾರಕ್ಕೆ ವಿಶ್ವಾಸವಿದೆ. 2 ಕೋಟಿ ನಕಲಿ ಫಲಾನುಭವಿಗಳನ್ನು ವ್ಯವಸ್ಥೆಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದರು.

Font Awesome Icons

Leave a Reply

Your email address will not be published. Required fields are marked *