‘ಸಪ್ತಸಾಗರದಾಚೆ ಎಲ್ಲೋ’ ಚಿತ್ರ ಮೆಚ್ಚಿದ ಸಚಿವ ಉದಯನಿಧಿ ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಪುತ್ರ, ಸಚಿವರೂ ಆದ ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

‘ಸನಾತನ ಧರ್ಮವು ಮಲೇರಿಯಾ, ಕೊರೊನಾ ಹಾಗೂ ಡೆಂಗ್ಯೂ ಇದ್ದಂತೆ” ಎಂದು ಉದಯನಿಧಿ ಸ್ಟಾಲಿನ್‌ ಹೇಳಿದ್ದು, ಅವರ ಹೇಳಿಕೆಗೆ ತೀವ್ರ ವಿರೋಧ, ಟೀಕೆ ವ್ಯಕ್ತವಾಗಿವೆ. ಈ ನಡುವೆ, ಉದಯನಿಧಿ ಸ್ಟಾಲಿನ್‌ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಅಭಿನಯದ ʻಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉದಯನಿಧಿ ಸ್ಟಾಲಿನ್ ತಮ್ಮ ಟ್ವೀಟ್‌ನಲ್ಲಿ ‘ರಕ್ಷಿತ್‌ ಶೆಟ್ಟಿ ಅಣ್ಣ! ನಿಮ್ಮ ಇತ್ತೀಚಿನ ಚಿತ್ರ ʼಸಪ್ತಸಾಗರದಾಚೆ ಎಲ್ಲೋʼ ಇಷ್ಟವಾಯಿತು. ಸಪ್ತಸಾಗರ ಅದ್ಭುತ ಸಿನಿಮಾ ಮೇಕಿಂಗ್. ಇಡೀ ತಂಡಕ್ಕೆ ಅಭಿನಂದನೆಗಳು! ಸೈಡ್ ಬಿ ಗಾಗಿ ಕಾತುರದಿಂದ ಕಾಯುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *