ಸಾಲ ತೀರಿಸಿದ್ದರೂ ಮನೆ ಹರಾಜಿಗೆ ಹಾಕಿದ ಗ್ರಾಮೀಣ ಬ್ಯಾಂಕ್‌

ಮೈಸೂರು: ಮೈಸೂರಿನ ವಿಜಯನಗರ ಬಡಾವಣೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಮುಖ್ಯ ಕಚೇರಿಯಲ್ಲಿ ಸಾಲ ಪಡೆದ ರೈತ ಸಾಲ ತೀರಿಸಿದ್ದರೂ ಸಹ ಮನೆ ಹರಾಜು ಹಾಕಿದ ಆರೋಪ ಕೇಳಿ ಬಂದಿದೆ.

ರೈತ ದೊರೆಸ್ವಾಮಿ ಎಂಬುವವರು ಕಾವೇರಿ ಗ್ರಾಮೀಣ ಬ್ಯಾಂಕ್‌ನಿಂದ ತಮ್ಮ ಮನೆ ಪತ್ರ ನೀಡಿ 15 ಲಕ್ಷ ಸಾಲ ಪಡೆದಿದ್ದರು. ಸಾಲ ಪಡೆದ ನಂತರ ಪ್ರತಿ ತಿಂಗಳು ತಮ್ಮ ಕೈಲಾದಷ್ಟು ಬಡ್ಡಿ ಅಸಲು ಕಟ್ಟುತ್ತಿದ್ದರು. ಹೀಗಿದ್ದರೂ ಬ್ಯಾಂಕ್‌ನವರು ದೊರೆಸ್ವಾಮಿ ಅವರ ಮನೆಯನ್ನು ಹರಾಜು ಹಾಕಿದ್ದಾರೆ.

ದೊರೆಸ್ವಾಮಿ ಪ್ರಕಾರ ಇದುವರೆಗೂ ಬಡ್ಡಿ ಸೇರಿ 18, 98,000 ರೂಪಾಯಿ ಸಾಲ ಮರು ಪಾವತಿ ಮಾಡಿದ್ದಾರಂತೆ. ಆದರೂ ಬ್ಯಾಂಕ್‌ನವರು ದೊರೆಸ್ವಾಮಿ ಅವರ ಮನೆಯನ್ನು ಏಕ ವ್ಯಕ್ತಿಗೆ ಹರಾಜು ಹಾಕಿದ್ದಾರಂತೆ. ಈ ಕಾರಣಕ್ಕೆ ನಿನ್ನೆ ಮಂಗಳವಾರ 50 ಕ್ಕೂ ಹೆಚ್ಚು ರೈತರು ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಮುತ್ತಿಗೆ ಹಾಕಿದ್ದಾರೆ.

ಬ್ಯಾಂಕ್‌ನವರು ದೊರೆಸ್ವಾಮಿ ಅವರ ಆಸ್ತಿ ಕಬಳಿಸಲು ಈ ರೀತಿ ಮಾಡಿದ್ದಾರೆ ಅನ್ನೋದು ರೈತರ ಆರೋಪವಾಗಿದೆ.

Font Awesome Icons

Leave a Reply

Your email address will not be published. Required fields are marked *