ʼಪ್ರಸಾದದಲ್ಲಿ ಮಕ್ಕಳಾಗದೇ ಇರುವ ರೀತಿ ಮಾತ್ರೆಗಳನ್ನು ಬೆರೆಸುತ್ತಿದ್ದರುʼ ಎಂದ ನಿರ್ದೇಶಕನ ಬಂಧನ

ಆಂದ್ರಪ್ರದೇಶ:  ತಿರುಪತಿ ಪ್ರಸಾದವಾದ ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆಯಾಗಿರುವುದು ಕೋಲಾಹಲ ಎಬ್ಬಿಸಿದೆ. ಲಡ್ಡು ಮಾಡಲು ಬಳಸಲಾದ ತುಪ್ಪದಲ್ಲಿ ದನದ ಕೊಬ್ಬು ಪತ್ತೆಯಾಗಿದೆ. ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿತರಣೆಯಾಗುತ್ತಿರುವ ಪ್ರಸಾದದ ಸ್ವಚ್ಛತೆ ಬಗ್ಗೆ ಸ್ಥಳೀಯ ಸರ್ಕಾರ ಹಾಗೂ ದೇವಾಲಯದ ಆಡಳಿತ ಮಂಡಳಿಗಳು ಜಾಗೃತೆಯಾಗಿವೆ.

ಇನ್ನು ಕೆಲವರು ಈ ವಿಷಯವಾಗಿ ತಮಗೆ ತೋಚಿದಂತೆ ಹೇಳಿಕೆಗಳನ್ನು ನೀಡುತ್ತಿದ್ದು, ತಿರುಪತಿ ಮಾತ್ರವೇ ಅಲ್ಲ, ಬೇರೆ ಕೆಲವು ದೇವಾಲಯಗಳ ಪ್ರಸಾದಗಳಲ್ಲಿಯೂ ಇಂಥಹಾ ಕಲಬೆರೆಕೆ ಸಾಮಾನ್ಯ ಎಂದಿದ್ದಾರೆ.

ಇದೀಗ ತಮಿಳು ನಿರ್ದೇಶಕರೊಬ್ಬರನ್ನು ದೇವಾಲಯದ ಪ್ರಸಾದದ ಕುರಿತಾಗಿನ ಹೇಳಿಕಗೆ ತಿರುಚಿ ಪೊಲೀಸರು ಬಂಧಿಸಿದ್ದಾರೆ. ‘ಬಕಾಸುರನ್’, ‘ದ್ರೌಪದಿ’ ಇನ್ನೂ ಕೆಲವು ಸಿನಿಮಾಗಳನ್ನು ನಿರ್ದೇಶಿಸಿ ಚರ್ಚೆಯಲ್ಲಿರುವ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್ ಅವರನ್ನು ತಿರುಚಿ ಪೊಲೀಸರು ಬಂಧಿಸಿದ್ದಾರೆ. ಪಳನಿ ದೇವಾಲಯದ ಪ್ರಸಾದದ ಕುರಿತಾದ ಹೇಳಿಕೆಯಿಂದಾಗಿ ಮಹೇಶ್ ಅವರನ್ನು ಬಂಧಿಸಲಾಗಿದೆ ಎನ್ನಲಾಗುತ್ತಿದೆ.

ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ್ದ ಮೋಹನ್ ಜಿ, ‘ಪಳನಿ ದೇವಾಲಯದಲ್ಲಿ ನೀಡಲಾಗುವ ಪಂಚಾಮೃತ ಪ್ರಸಾದದಲ್ಲಿ ಮಕ್ಕಳಾಗದೇ ಇರುವ ರೀತಿ ಮಾತ್ರೆಗಳನ್ನು ಬೆರೆಸುತ್ತಿದ್ದರು, ಅಲ್ಲಿ ಕೆಲಸ ಮಾಡುವವರೇ ನನಗೆ ಗೊತ್ತಿರುವವರೇ ಇದನ್ನು ನನಗೆ ಹೇಳಿದ್ದರು’ ಎಂದಿದ್ದರು. ಇದರ ಬಗ್ಗೆ ದೇವಾಲಯವಾಗಲಿ, ಸರ್ಕಾರವಾಗಲಿ ಅಧಿಕೃತ ಹೇಳಿಕೆ ನೀಡಿಲ್ಲ, ಆದರೆ ಅಲ್ಲಿ ಕೆಲಸ ಮಾಡುತ್ತಿದ್ದವರೇ ಹೇಳಿಕೊಂಡಿರುವ ವಿಷಯ ಇದು’ ಎಂದಿದ್ದರು ಮೋಹನ್. ಹೇಳಿಕೆ ಆಧರಿಸಿ ತಿರುಚಿ ಪೊಲೀಸರು ಮೋಹನ್ ಅವರನ್ನು ಚೆನ್ನೈನಲ್ಲಿ ಬಂಧಿಸಿ ತಿರುಚಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ.

Font Awesome Icons

Leave a Reply

Your email address will not be published. Required fields are marked *