ಅತ್ಯಾಚಾರ ಆರೋಪ; ಎಸ್‌ಐಟಿ ವಿಚಾರಣೆಗೆ ಸಹಕರಿಸದ ಹೆಚ್​ಡಿ ರೇವಣ್ಣ

ಬೆಂಗಳೂರು: ಅತ್ಯಾಚಾರ ಆರೋಪ ಮತ್ತು ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಹಾಲಿ ಶಾಸಕ ಹೆಚ್​ಡಿ ರೇವಣ್ಣರನ್ನು ಕಳೆದ ದಿನ ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ನಿರೀಕ್ಷಣಾ ಜಾಮೀನಿ ಅರ್ಜಿ ವಜಾ ಬೆನ್ನಲ್ಲೇ ಬಂಧಿಸಲಾಗಿದೆ.

ಇನ್ನು ಇಂದು ಸಂಜೆಯೊಳಗೆ ನ್ಯಾಯಾಧೀಶರ ಮುಂದೆ ರೇವಣ್ಣರನ್ನು ಎಸ್​ಐಟಿ ಹಾಜರುಪಡಿಸಲಿದೆ. ಮಧ್ಯೆ ರಾತ್ರಿ ಎಸ್​​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣ ಬಳಿ ಮಾಹಿತಿ ಪಡೆದುಕೊಂಡಿದ್ದು, ಆದರೆ ಎಸ್​ಐಟಿ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಿಲ್ಲ ಎಂದು ತಿಳಿದು ಬಂದಿದೆ. ಎಸ್​​ಐಟಿ ಅಧಿಕಾರಿಗಳು ಹೆಚ್​ಡಿ ರೇವಣ್ಣರನ್ನು ವಿಚಾರಣೆ ಮಾಡಿದ್ದು,ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ. ತಾನು ಯಾರಿಗೂ ಕಿಡ್ನ್ಯಾಪ್ ಮಾಡಿ ಎಂದು ಹೇಳಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ರಾತ್ರಿ ಮಲಗಲು ಸಿಐಡಿ ಸೆಲ್​ನಲ್ಲಿ ಇರಿಸದೇ ಎಸ್​ಐಟಿ ತನ್ನ ಕಛೇರಿಯಲ್ಲಿ ವ್ಯವಸ್ಥೆ ಮಾಡಿದ್ದು, ಹೀಗಾಗಿ ರಾತ್ರಿ ರೇವಣ್ಣರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿಲ್ಲ. ಇಂದು ಕೆಲ ಪ್ರಶ್ನೆಗಳನ್ನು ಮಾಡಲಿರುವ ಎಸ್​ಐಟಿ ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ತೀರ್ಮಾನಿಸಿದ್ದಾರೆ. ಇನ್ನು ಅತ್ಯಾಚಾರಕ್ಕೆ ಒಳಗಾದ ಮಹಿಳೆ ದೂರು ನೀಡಬಾರದು ಎಂದು ಆಕೆಯನ್ನು ಅಪಹರಣ ಮಾಡಿದ ಗಂಭೀರ ಆರೋಪ ಈಗ ಹೆಚ್​​ಡಿ ರೇವಣ್ಣ ಮೇಲಿದೆ.

 

 

Font Awesome Icons

Leave a Reply

Your email address will not be published. Required fields are marked *