News Kannada
ಪುತ್ತೂರು: ಶ್ವಾಸ ಕೋಶದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಳಿಕೆ ಗ್ರಾಮದ ಮಿತ್ತಳಿಕೆ ನಿವಾಸಿ ಕುಮಾರಿ ಪುಲಕಿತ ಎಂಬವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಆಕ್ಸಿಜನ್ ಯಂತ್ರವನ್ನು ನೀಡಿದರು. ಕಳೆದ ಹತ್ತು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು , ಆರ್ಥಿಕವಾಗಿ ತೀರ ಬಾಡತನದಲ್ಲಿರುವ ಇವರಿಗೆ ಆಕ್ಸಿಜನ್ ಯಂತ್ರ ಖರೀದಿಸಲು ಹಣಕಾಸಿನ ಅಡಚಣೆಯಾಗಿತ್ತು.
ತನ್ನ ಸಂಕಷ್ಟವನ್ನು ಕಳೆದ ಮೂರು ದಿನಗಳ ಹಿಂದೆ ಶಾಸಕರ ಬಳಿ ಹೇಳಿಕೊಂಡಿದ್ದರು. ಆಕ್ಸಿಜನ್ ಯಂತ್ರ ಕೊಡಿಸುವ ಭರವಸೆ ನೀಡಿದ್ದ ಶಾಸಕರು ಮೂರು ದಿನದೊಳಗೆ ಅದನ್ನು ಸಂತ್ರಸ್ಥ ಮಹಿಳೆಗೆ ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಅಳಿಕೆ ಗ್ರಾಪಂ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಉಪಸ್ಥಿತರಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ನನ್ನ ಬಳಿ ಸಹಾಯ ಕೇಳಿ ಈ ಬಡ ಕುಟುಂಬ ಕಚೇರಿಗೆ ಕಳೆದ ಮೂರದಿನಗಳ ಹಿಂದೆ ಬಂದಿದ್ರು. ತಕ್ಷಣವೇ ಮಹಿಳೆಯ ಉಸಿರಾಟಕ್ಕೆ ಅಗತ್ಯವಾಗಿ ಬೇಕಾದ ಆಕ್ಸಿಜನ್ ಯಂತ್ರವನ್ನು ಕೊಡಿಸಿದ್ದೇನೆ. ಅವರು ಆರೋಗ್ಯವಂತರಾಗಿರಲಿ ಎಂಬುದೇ ನನ್ನ ಆಶಯವಾಗಿದೆ ಎಂದು ತಿಳಿಸಿದ್ದಾರೆ.
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.
This site is protected by reCAPTCHA and the Google
Privacy Policy and
Terms of Service apply.
44