ಕಾರವಾರ: ಭಟ್ಕಳದಲ್ಲಿ ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿರುವ ಘಟನೆ ನಡೆದಿದೆ.
ಅಬ್ಬರದ ಮಳೆಗೆ ಓಂ ಗಣೇಶ್ ಹೆಸರಿನ ಮಹಾದೇವ ಖಾರ್ವಿ ಎಂಬವರಿಗೆ ಸೇರಿದ ಬೋಟ್ ಮುಳುಗಡೆಯಾಗಿದ್ದು, ಬೋಟ್ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.
ಘಟನೆಯಿಂದ ಲಕ್ಷಾಂತರ ರೂ. ಹಾನಿ ಸಂಭವಿಸಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಕರಾವಳಿ ಭಾಗದ ಕಾರವಾರ, ಅಂಕೋಲ, ಕುಮಟಾ, ಭಟ್ಕಳ ಭಾಗದಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗಿದ್ದು, ಬಿಸಿಲಿನ ಅಬ್ಬರಕ್ಕೆ ಇದೇ ಮೊದಲ ಬಾರಿಗೆ ವರುಣ ಕರಾವಳಿ ಭಾಗದಲ್ಲಿ ತಂಪೆರೆದಿದ್ದಾನೆ.