ಆರ್ ಸಿಬಿ ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ- ಬಿವೈ ವಿಜಯೇಂದ್ರ ಟಾಂಗ್ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಹುಬ್ಬಳ್ಳಿ, ಅಕ್ಟೋಬರ್,9,2024 (www.justkannada.in):   ತಮ್ಮ ವಿರುದ್ಧ ಆರ್​ಸಿಬಿ(ರಾಯಣ್ಣ,ಚನ್ನಮ್ಮ ಬ್ರಿಗೇಡ್‌) ​ ಕಟ್ಟಲು ಮುಂದಾಗಿರುವ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಆರ್ ಸಿಬಿ ಟಿ-20 ಆಡೋಕೆ ಮಾತ್ರ ಚೆನ್ನಾಗಿರುತ್ತೆ. ಆದರೆ ನಾನು ಟೆಸ್ಟ್ ಮ್ಯಾಚ್ ಆಡುವುದಕ್ಕೆ ಬಂದವನು ಎಂದು ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಬಿವೈ ವಿಜಯೇಂದ್ರ, ನಾನು ಸುದೀರ್ಘವಾಗಿ ಓಡುವಂತಹ ಕುದುರೆ. ವಿಜಯೇಂದ್ರ ತಾಕತ್ತಿನ ಬಗ್ಗೆ ಅರಿತುಕೊಂಡಿರುವುದು ಬಹಳ ಸಂತಸ. ಪಕ್ಷಕ್ಕೆ ದ್ರೋಹ ಮಾಡಿ ಪಕ್ಷ ಬಿಟ್ಟು ಹೋದವರು ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಯೋಗ್ಯತೆ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡ ಕೆಲಸ ಮಾಡಲು ಭಗವಂತ ಬುದ್ದಿ ನೀಡಿದ್ದಾನೆ. ಆ ಕಾರ್ಯ ಮಾಡುವೆ. ನಾನು ಯಾರ ಹೇಳಿಕೆ ಗಂಭೀರವಾಗಿ ಪರಿಗಣಿಸಲ್ಲ, ನೋವು ಮಾಡಿಕೊಳ್ಳಲ್ಲ. ಲೋಕಸಭಾ ಚುನಾವಣೆಯಲ್ಲಿ ಕೆಲವರನ್ನು ಪಕ್ಷದಿಂದ ಹೊರಹಾಕಿದ್ದೇವೆ. ಈಗಾಗಲೇ ಶುದ್ಧೀಕರಣ ಆಗಿದೆ  ಎಂದು ಬಿವೈ ವಿಜಯೇಂದ್ರ ಹೇಳಿದರು.

Key words: RCB, T20, good, played, BJP,  BY Vijayendra

Font Awesome Icons

Leave a Reply

Your email address will not be published. Required fields are marked *