ಇಬ್ಬರನ್ನು ಹೊಡೆದು ಕೊಂದ ಜನ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮೇಘಾಲಯ : ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ  ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್​ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾಗಿರುವ ಮೈರಾಂಗ್​ನ ನೊಂಗ್ತ್ಲಿವ್​ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಬಾಲಕಿ ಮನೆಯಲ್ಲಿದ್ದಾಗ ಇಬ್ಬರೂ ಚಾಕುವಿನಿಂದ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದರು ಎಂದು ಆರೋಪಿಸಲಾಗಿದೆ.

ಬಾಲಕಿ ಕಿರುಚಾಟವನ್ನು ಕೇಳಿ ಅಕ್ಕಪಕ್ಕದ ಮನೆಯವರು ಓಡಿ ಬಂದು ಇಬ್ಬರನ್ನು ಹಿಡಿದಿದ್ದಾರೆ. ಉಳಿದವರಿಗೂ ಮಾಹಿತಿ ನೀಡಿ ಹೊಡೆದು ಕೊಂದಿದ್ದಾರೆ ಈ ವೇಳೆ ಪೊಲೀಸರು ತಡೆಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ.ಇಬ್ಬರಲ್ಲಿ ಒಬ್ಬ ತಿರೋತ್ ಸಿಂಗ್ ಎಂಬಾತ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಇನ್ನೊಬ್ಬ ಶಿಲ್ಲಾಂಗ್ ಸಿವಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮದುವೆ ನೆಪದಲ್ಲಿ ಆರೋಪಿ ಸಂತ್ರಸ್ತೆಯನ್ನು 6 ತಿಂಗಳಿನಿಂದ ಅತ್ಯಾಚಾರವೆಸಗುತ್ತಿದ್ದ ಎಂದು ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ಯುವಕನನ್ನು ಬಂಧಿಸಲಾಗಿದೆ. ಆರೋಪಿ ಸುರೇಂದ್ರ ಇನ್​ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ನಂತರ ಮೊಬೈಲ್​ನಲ್ಲಿ ಮಾತನಾಡಲು ಪ್ರಾರಂಭಿಸಿದರು. ಆರೋಪಿ ರಸ್ತೆ ನಿರ್ಮಾಣ ಗುತ್ತಿಗೆದಾರರ ಬಳಿ ಕೆಲಸ ಮಾಡುತ್ತಿದ್ದು, ಆತನ ಪ್ರೀತಿಯ ಬಲೆಯಲ್ಲಿ ಬಾಲಕಿ ಬಿದ್ದಿದ್ದಳು.

Font Awesome Icons

Leave a Reply

Your email address will not be published. Required fields are marked *