ಇಬ್ಬರಿಗೆ ಗಾಯ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ರಾಯಚೂರು: ಜಿಲ್ಲೆಯ ‌ಸಿಂಧನೂರು ತಾಲೂಕಿ‌ನ ರೈತನಗರ ಕ್ಯಾಂಪ್ ಬಳಿ ಮರಳು ವಾಹನ ಸೀಜ್ ಮಾಡಲು ಹೋಗುವಾಗ ಪೊಲೀಸ್ ಜೀಪ್ ಪಲ್ಟಿಯಾದ ಘಟನೆ ನಡೆದಿದೆ.

ಅಪಘಾತದಲ್ಲಿ ಹೋಂ ಗಾರ್ಡ್ ಶಕ್ಷಾವಲಿ (33), ಪೇದೆ ಕರಿಯಪ್ಪ (35) ಎಂಬುವವರಿಗೆ ಗಾಯವಾಗಿದೆ. ಗಾಯಾಳುಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ ಮರಳಿನ ಟ್ರ್ಯಾಕ್ಟರ್ ಓವರ್ ಟೇಕ್ ಮಾಡಲು ಹೋದಾಗ ವಾಹನ ಪಲ್ಟಿಯಾಗಿದೆ.

ಸಿಂಧನೂರು ಟ್ರಾಫಿಕ್ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊನೆಗೆ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಸೀಜ್ ಮಾಡಲಾಗಿದೆ.

Font Awesome Icons

Leave a Reply

Your email address will not be published. Required fields are marked *