ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಈ ಬಾರಿಯೂ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಸಿನಿಮಾದಿಂದ ಬಿಡುವಿಲ್ಲದ ಕೆಲಸವಿದ್ದು, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬದಂದು ಅಭಿಮಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದ್ದಾರೆ.
ಕೆಜಿಎಫ್ ಸರಣಿ ಚಿತ್ರಗಳ ಬಳಿಕ ಯಶಸ್ಸು ಕಂಡಿರುವ ನಟ ಯಶ್, ಬಂದ ಚಿತ್ರಗಳನ್ನು ಒಪ್ಪಿಕೊಳ್ಳದೇ, ಕಥೆ ಆಯ್ಕೆಯಲ್ಲಿ ಜಾಣ ನಡೆ ತೋರಿಸಿರುವ ಅವರು, ನೂತನ ಚಿತ್ರದಲ್ಲಿ ಬ್ಯೂಸಿಯಾಗಿದ್ದಾರೆ.