ಉತ್ತರ ಕರ್ನಾಟಕದ ಸಮಾವೇಶದಲ್ಲಿ ಪ್ರಧಾನಿ ಭಾಗಿ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಳಗಾವಿ: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ದೇಶ್ಯಾದ್ಯಂತ ಪ್ರಚಾರ ಸಭೆಗಳನ್ನು ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕಕ್ಕೂ ಆಗಮಿಸಲಿದ್ದಾರೆ.

ಎಪ್ರಿಲ್ 28 ಹಾಗೂ 29 ರಂದು ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ಕ್ಯಾಂಪೇನ್ ಮಾಡಲಿದ್ದಾರೆ. ಎರಡು ದಿನ, 12 ಕ್ಷೇತ್ರಗಳ ಟಾರ್ಗೆಟ್ ಮಾಡಿ ಆರು ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ.

ಎಪ್ರಿಲ್ 28 ರಂದು ದಾವಣಗೆರೆ, ಕಾರವಾರ, ಬೆಳಗಾವಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವಿಟಿಯು ಗೆಸ್ಟ್ ಹೌಸ್, ಐಟಿಸಿ ವೆಲ್‌ಕಮ್, ಮೇರಿಯಟ್, ಯುಕೆ-27 ಯಾವುದಾರು ಒಂದು ಹೊಟೇಲ್​ನಲ್ಲಿ ತಂಗಲಿದ್ದಾರೆ. ಎಸ್‌ಪಿಜಿ ಪರಿಶೀಲನೆ ಬಳಿಕ ಹೊಟೇಲ್​ ನಿಗದಿಯಾಗಲಿದೆ. ಎಪ್ರಿಲ್ 29 ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ಉತ್ತರ ಕರ್ನಾಟಕ ಭಾಗಕ್ಕೆ ನರೇಂದ್ರ ಮೋದಿ ಬರಲಿದ್ದಾರೆ. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಭಾಗದಲ್ಲಿ ಬಿಜೆಪಿಯನ್ನು ಇನ್ನಷ್ಟು ಸುಭದ್ರಗೊಳಿಸಲು ಪ್ರಧಾನಿ ಮೋದಿ ಕಹಳೆ ಊದಲಿದ್ದಾರೆ.

ದಾವಣಗೆರೆಯಿಂದ ಆರಂಭವಾಗುವ ಮೋದಿ ದಂಡಯಾತ್ರೆ ಬೆಳಗಾವಿ, ಕಲಬುರ್ಗಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ನಡೆಯಲಿದೆ.

Font Awesome Icons

Leave a Reply

Your email address will not be published. Required fields are marked *