ಐವರ ಬಂಧನ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಳಗಾವಿ: ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪದಲ್ಲಿ ಹಣದ ಸಮೇತ ನಾಲ್ವರು ಸಿಕ್ಕಿಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಜಿಲ್ಲೆಯ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ನಡೆದಿದೆ.

ಮನೆ ಮನೆಗೆ ತೆರಳಿ ಒಂದು ಸಾವಿರ ರೂಪಾಯಿ ಹಂಚುತ್ತಿದ್ದ ವೇಳೆ ಹಣದ ಸಮೇತ ನಾಲ್ವರು ಹೆಬ್ಬಾಳ್ಕರ್ ಬೆಂಬಲಿಗರು ಸಿಕ್ಕಿಬಿದ್ದಿದ್ದಾರೆ.

ಹಣ ಹಂಚುವ ವಿಚಾರ ತಿಳಿದು ಬಿಜೆಪಿ ಕಾರ್ಯಕರ್ತರು ಸ್ಥಳಕ್ಕೆ ಬರುತ್ತಿದ್ದಂತೆ ಓಡಿ ಹೋಗಲು ಯತ್ನಿಸಿದ್ದಾರೆ. ಬಳಿಕ ಸಿನಿಮೀಯ ರೀತಿಯಲ್ಲಿ ಓಡಾಡಿಸಿ ಹಿಡಿದಿದ್ದಾರೆ.

ಗೋಕಾಕ್ ಪರಾಜಿತ ಅಭ್ಯರ್ಥಿ ಡಾ.ಮಹಾಂತೇಶ್ ಕಡಾಡಿ, ಇಬ್ಬರು ಭದ್ರಾವತಿ ಮೂಲದ ಯುವಕರು ಹಾಗೂ ಇಬ್ಬರು ಹರ್ಷಾ ಶುಗರ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನು ಹಿಡಿದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಪರ ಹಣ ಹಂಚಲು ಕಾಂಗ್ರೆಸ್ ಮುಖಂಡ ಪರಾಜಿತ ಅಭ್ಯರ್ಥಿ ಡಾ.ಮಹಾಂತೇಶ್ ಕಡಾಡಿ ಜೊತೆಗೆ ಬಂದಿದ್ದಾಗಿ ಇಬ್ಬರು ಹೇಳಿದ್ದಾರೆ.

ಇನ್ನು ಮತದಾರರಿಗೆ ಹಂಚಲು ತಂದಿದ್ದ ಇಪ್ಪತ್ತು ಲಕ್ಷ ಹಣ ಮತ್ತು ಐವರನ್ನ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *