ಓರ್ವ ಸಾವು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ತುಮಕೂರು: ಮಧುಗಿರಿ ತಾಲೂಕಿನ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ  ಕೆಎಸ್ಆರ್​ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ನಡೆದಿದೆ.

ಬೈಕ್ ಸವಾರ ಮಹೇಂದ್ರ (19),  ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡವರನ್ನು ಚರಣ್ (19), ಹಾಗೂ ಅನಿಲ್ (19)  ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಚರಣ್ ಹಾಗೂ ಅನಿಲ್​ರನ್ನ ಕೂಡಲೇ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಈ ಮೂವರು ಮಧುಗಿರಿ ತಾಲೂಕಿನ ವಾಟದ ಹೊಸಹಳ್ಳಿ ಗ್ರಾಮದವರಾಗಿದ್ದು, ಒಂದೇ ಬೈಕ್ ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಕೆಎಸ್ಆರ್​ಟಿಸಿ ಬಸ್ ಗೆ ಬೈಕ್ ಮುಖಾಮುಖಿಯಾಗಿ ಡಿಕ್ಕಿಯಾಗಿದೆ.

ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *