ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಕುಂದಗೋಳದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಬೃಹತ್ ಬಹಿರಂಗ ಪ್ರಚಾರ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾಗಿಯಾಗಿದ್ದು, ಕಾಂಗ್ರೆಸ್ ಗೆ ಮತ ಹಾಕುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಶ್ರೀ ಸಲೀಂ ಅಹಮದ್, ಲೋಕಸಭಾ ಅಭ್ಯರ್ಥಿಯಾದ ಶ್ರೀ ವಿನೋದ ಅಸೂಟಿ, ಕುಂದಗೋಳ ಉಸ್ತುವಾರಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ನಾರಾಯಣ ಸ್ವಾಮಿ, ಶಾಸಕರಾದ ಎನ್ ಎಚ್ ಕೋನರಡ್ಡಿ, ಮಾಜಿ ಶಾಸಕರುಗಳಾದ ಕುಸುಮಾವತಿ ಶಿವಳ್ಳಿ, ಎ ಎಂ ಹಿಂಡಸಗೇರಿ, ಅರವಿಂದ ಕಟಗಿ, ಎಂ ಎಸ್ ಅಕ್ಕಿ, ಮೋಹನ ಲಿಂಬಿಕಾಯಿ, ಅಜೀಮ್ ಪೀರ ಖಾದ್ರಿ ಮತ್ತು ಚಂದ್ರಶೇಖರ್ ಜುಟ್ಟಲ್, ಜಗದೀಶ ಉಪ್ಪಿನ, ಶಿವಾನಂದ ಬೆಂತೂರ, ಷಣ್ಮುಖ ಶಿವಳ್ಳಿ ಹಾಗೂ ಪಕ್ಷದ ಜಿಲ್ಲಾ ಹಾಗೂ ಬ್ಲಾಕ್ ಅಧ್ಯಕ್ಷರುಗಳು, ಮಹಿಳಾ ಅಧ್ಯಕ್ಷರು ಹಾಗೂ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.